* ಕೇಂದ್ರ ಸಚಿವ ಪ್ಉತ್ರನಿಗೆ ಮತ್ತೆ ಸಂಕಷ್ಟ* ಆಶಿಶ್ ಮಿಶ್ರಾ ಜಾಮೀನು ಅರ್ಜಿ ರದ್ದುಗೊಳಿಸಿದ ಸುಪ್ರೀಂ* ಒಂದು ವಾರದಲ್ಲಿ ಶರಣಾಗಲು ಆದೇಶ* ಲಖೀಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ

ಲಕ್ನೋ(ಏ.18): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಸಿಜೆಐ ಎನ್‌ವಿ ರಾಮನ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ವಿಶೇಷ ಪೀಠವು ಆರೋಪಿಗಳಿಗೆ ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿದೆ. ಅಲಹಾಬಾದ್ ಹೈಕೋರ್ಟ್ ಆಶಿಶ್ ಜಾಮೀನು ನೀಡಿದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅಲಹಾಬಾದ್ ಹೈಕೋರ್ಟ್‌ನಲ್ಲಿ ನೊಂದವರ ವಾದಗಳನ್ನು ಪರಿಗಣಿಸಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಆಶಿಶ್ ಜನತಾ ದರ್ಬಾರ್ ಆಯೋಜಿಸಿದ್ದರು

ಏಪ್ರಿಲ್ 16 ರ ಶನಿವಾರದಂದು ಆಶಿಶ್ ಅವರು ಬನ್ಬೀರ್‌ಪುರ ಅಸೆಂಬ್ಲಿಯಲ್ಲಿ ಜನತಾ ದರ್ಬಾರ್ ಆಯೋಜಿಸಿದ್ದರು. ಇಲ್ಲಿಗೆ ಆಗಮಿಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರದ ಭರವಸೆ ನೀಡಿದರು. ಜನತಾ ದರ್ಬಾರ್ ನ ಫೋಟೋವನ್ನು ಆಶಿಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಿನ್ನೆಯೂ ಅವರು ಬಿಜೆಪಿ ನಾಯಕರ ಜೊತೆ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದರು.

ನಿರ್ಧಾರವನ್ನು ಏಪ್ರಿಲ್ 4 ರಂದು ಕಾಯ್ದಿರಿಸಲಾಯಿತು

ಆಶಿಶ್ ಜಾಮೀನು ರದ್ದುಗೊಳಿಸುವಂತೆ ರೈತರು ಅರ್ಜಿ ಸಲ್ಲಿಸಿದ್ದರೆಂಬುವುದು ಉಲ್ಲೇಖನೀಯ. ಈ ಮೂಲಕ ತನ್ನ ವ್ಯಾಪ್ತಿಯ ಆಧಾರದ ಮೇಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿದ್ದರು. ಮತ್ತೊಂದೆಡೆ, ಈ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ನ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಏಪ್ರಿಲ್ 4 ರಂದು ಕಾಯ್ದಿರಿಸಿತ್ತು. ಇಂದು ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ತೀರ್ಪು ನೀಡಿದೆ. ಅಲಹಾಬಾದ್ ಹೈಕೋರ್ಟ್ ಈ ವಿಷಯವನ್ನು ಮರುಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದಕ್ಕೂ ಮುನ್ನ ಹೈಕೋರ್ಟ್ ಆಶಿಶ್ ಮಿಶ್ರಾಗೆ ಜಾಮೀನು ನೀಡಿತ್ತು.

ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರ

ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿರುವ ಟಿಕುನಿಯಾ ಪಾರ್ಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರೈತರು ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರಿಗೆ ಕಪ್ಪು ಬಾವುಟ ತೋರಿಸಿದರು. ಈ ವೇಳೆ ಎಸ್ ಯುವಿ ವಾಹನ ಹರಿದ ಪರಿಣಾಮ ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಎಸ್ ಯುವಿಯಲ್ಲಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ. ಈ ಘಟನೆಯ ನಂತರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದರು. ಪೊಲೀಸರು ತನ್ನ 5000 ಪುಟಗಳ ಆರೋಪಪಟ್ಟಿಯಲ್ಲಿ ಆಶಿಶ್ ಮಿಶ್ರಾ ಅವರನ್ನು ಆರೋಪಿಯನ್ನಾಗಿ ಮಾಡಿತ್ತು, ಆದರೆ ಅಲಹಾಬಾದ್ ಹೈಕೋರ್ಟ್ ಫೆಬ್ರವರಿಯಲ್ಲಿ ಅವರಿಗೆ ಜಾಮೀನು ನೀಡಿತು.