Asianet Suvarna News Asianet Suvarna News

ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಜಯ| ಗೋವಾ ಮೇಲ್ಮನವಿ ವಜಾ ಗೊಳಿಸಿದ ಸುಪ್ರೀಂ| ಗೋವಾ ಸರ್ಕಾರಕ್ಕೆ ಭಾರೀ ಹಿನ್ನಡೆ|ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು| ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು|
 

Supreme Court Dismissed Appeal from Goa for Mahadayi Dipute
Author
Bengaluru, First Published Mar 2, 2020, 12:55 PM IST

ನವದೆಹಲಿ[ಮಾ.02]: ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಮತ್ತೊಂದು ಜಯ ಸಿಕ್ಕಿದೆ. ಹೌದು, ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. 

"

ಮಹದಾಯಿ: ಗೋವಾಗೆ ತಿರುಗೇಟು ನೀಡಲು ಕರ್ನಾಟಕ ಸಜ್ಜು

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ನಡೆಯನ್ನ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಈ ವಿಶೇಷ ಮೇಲ್ಮನವಿಯನ್ನ ಕೈಗೆತ್ತಿಕೊಂಡ ಸುಪ್ರೀಂ ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ತೀರ್ಪು ನೀಡುವ ಮೂಲಕ ಗೋವಾ ಸರ್ಕಾರದ ಮೇಲ್ಮನವಿಯನ್ನ ವಜಾ ಗೊಳಿಸಿದೆ. 

ಕರ್ನಾಟಕ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ನೇತೃತ್ವದ ವಕೀಲರ ತಂಡ ವಾದ ಮಂಡಿಸಿದೆ. ಈ ತೀರ್ಪಿನ ಮೂಲಕ ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. 

ಮಹದಾಯಿ: ಕರ್ನಾಟಕಕ್ಕೆ ಜಯ, ಗೋವಾದ ತಕರಾರಿಗೆ ಮಣೆ ಹಾಕದ ಕೇಂದ್ರ!

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅಡ್ವೋಕೇಟ್ ಜನರಲ್ [ಎಜಿ] ಪ್ರಭುಲಿಂಗ ನಾವಡಗಿ ಅವರು, ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಜಯ ಸಿಕ್ಕಿದೆ. ಈ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. ಮಹದಾಯಿ ಕಾಮಗಾರಿ ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ, ಟ್ರಿಬ್ಯುನಲ್ ಆದೇಶದನ್ವಯ ಕರ್ನಾಟಕ ಕಾಮಗಾರಿ ನಡೆಸಬಹುದು. ಗೋವಾ ಸರ್ಕಾರದ ಅರ್ಜಿಯನ್ನ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಹೇಳಿದ್ದಾರೆ. 

Follow Us:
Download App:
  • android
  • ios