Asianet Suvarna News Asianet Suvarna News

Bilkis Bano Case ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರಕ್ಕೆ ಸುಪ್ರೀಂ ನೊಟೀಸ್‌

Bilkis Bano rapists release: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆ ಗೊಳಿಸಿರುವ ಸಂಬಂಧ ಪ್ರಕರಣದ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಗುಜರಾತ್‌ ಸರ್ಕಾರಕ್ಕೆ ನೊಟೀಸ್‌ ಜಾರಿಗೊಳಿಸಿದೆ. ಜತೆಗೆ ವಿಚಾರಣೆಯಲ್ಲಿ ಭಾಗಿಯಾಗುವಂತೆ ಎಲ್ಲಾ ಆರೋಪಿಗಳಿಗೂ ತಾಕೀತು ಮಾಡಿದೆ.

supreme court issues notice to gujarat govt for releasing bilkis bano rapists
Author
First Published Aug 25, 2022, 12:44 PM IST

ನವದೆಹಲಿ: ಬಿಲ್ಕಿಸ್‌ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿದ ಗುಜರಾತ್‌ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗುರುವಾರ ನೊಟೀಸ್‌ ಜಾರಿಗೊಳಿಸಿದೆ. ಯಾವ ಆಧಾರದ ಮೇಲೆ ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಪ್ರಶ್ನಿಸಿದೆ. ಜತೆಗೆ ಬಿಡಗಡೆಗೊಂಡ 11 ಅಪರಾಧಿಗಳನ್ನು ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಎನ್‌ ವಿ ರಮಣ ಅವರ ನೃತೃತ್ವದ ಪೀಠದಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಬಿಲ್ಲಿಕ್‌ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್‌ ಸರ್ಕಾರದ ನಿರ್ಧಾರವನ್ನು ದೇಶಾದ್ಯಂತ ಖಂಡಿಸಲಾಗಿತ್ತು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಸರ್ಕಾರ ಇಬ್ಬಗೆ ನೀತಿ ಅನುಸರಿಸಿದೆ ಎಂಬ ಆಕ್ರೋಶ ಜಾಗತಿಕವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಪ್ರಕರಣದ ವಿಚಾರಣೆ ಆರಂಭಿಸಿದೆ. ಎರಡು ವಾರಗಳಲ್ಲಿ ಪ್ರಕರಣದ ಪೂರ್ಣಾವಧಿ ವಿಚಾರಣೆ ಆರಂಭಿಸುವುದಾಗಿ ಕೋರ್ಟ್‌ ತಿಳಿಸಿದೆ.

ಬಿಲ್ಕಿಸ್‌ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಸ್ವತಂತ್ರೋತ್ಸವದ ಅಂಗವಾಗಿ ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿ ಹೊಸ ವಿವಾದವನ್ನು ಮೈಮೇಲೆತ್ತು. ಇದರ ಬೆನ್ನಲ್ಲೇ ಗುಜರಾತ್‌ನ ಗೋದ್ರಾ ಕ್ಷೇತ್ರದ ಬಿಜೆಪಿ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣರು ಮತ್ತು ಉತ್ತಮ ಸಂಸ್ಕಾರ ಉಳ್ಳವರು ಎಂದು ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದರು. ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಬಿಜೆಪಿ ಶಾಸಕ ಸಿಕೆ ರೌಲ್ಜಿ, ಅತ್ಯಾಚಾರಿಗಳು ಅಪರಾಧ ಮಾಡಿದ್ದಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಆದರೆ ಜೈಲಿನಲ್ಲಿ ಅವರು ಉತ್ತಮ ನಡತೆ ಹೊಂದಿದ್ದರು. ಅವರೆಲ್ಲರೂ ಬ್ರಾಹ್ಮಣರು ಮತ್ತು ಉತ್ತಮ ಸಂಸ್ಕಾರ ಹೊಂದಿದವರು ಎಂದು ಹೇಳಿಕೆ ನೀಡಿದ್ದರು. 

ಇದನ್ನೂ ಓದಿ: Bilkis Bano Case: 11 ಅತ್ಯಾಚಾರಿಗಳಿಗೆ ಬಿಡುಗಡೆ ಭಾಗ್ಯ, ಗುಜರಾತ್‌ ಸರ್ಕಾರದ ವಿರುದ್ಧ ಆಕ್ರೋಶ

ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಬೇಕೊ ಅಥವಾ ಬೇಡವೊ ಎಂಬ ನಿರ್ಧಾರ ತೆಗೆದುಕೊಳ್ಳಲು ರಚಿಸಿದ ಸಮಿತಿಯಲ್ಲಿ ಸಿಕೆ ರೌಲ್ಜಿ ಕೂಡ ಒಬ್ಬರು. ಸಮಿತಿಯ ಸಭೆಯಲ್ಲಿ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಬೇಕು ಎಂದು ಅವಿರೋಧವಾಗಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದರ ಪರಿಣಾಮ ಸ್ವತಂತ್ರೋತ್ಸವದ ಮರುದಿನ ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳು ಬಿಡುಗಡೆಯಾಗಿದ್ದರು. ಅತ್ಯಾಚಾರಿಗಳಲ್ಲಿ ಒಬ್ಬ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಬಿಡುಗಡೆ ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಸುಪ್ರೀಂ ಕೋರ್ಟ್‌ ಗುಜರಾತ್‌ ಸರ್ಕಾರ ಈ ಬಗ್ಗೆ ನಿರ್ಧರಿಸಬೇಕು, ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿತ್ತು. 

"ಅವರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾರ ಇಲ್ಲವಾ ಎಂಬುದು ನನಗೆ ಗೊತ್ತಿಲ್ಲ. ಆದರೆ ಅಪರಾಧ ಮಾಡಲು ಕಾರಣ ಬೇಕಲ್ಲವೇ," ಎಂದು ಮೋಜೊ ಸ್ಟೋರಿ ಮಾಧ್ಯಮಕ್ಕೆ ರೌಲ್ಜಿ ಹೇಳಿದ್ದಾರೆ. 

ಇದನ್ನೂ ಓದಿ: ಆಡೋದು ಒಂದು, ಮಾಡೋದು ಒಂದು; ದ್ವಂದ್ವ ನೀತಿ ಜನತೆ ನೋಡುತ್ತಿದೆ; ರಾಹುಲ್‌ ಗಾಂಧಿ

"ಅವರು ಬ್ರಾಹ್ಮಣರು ಮತ್ತು ಬ್ರಾಹ್ಮಣರು ಉತ್ತಮ ಸಂಸ್ಕಾರಕ್ಕೆ ಹೆಸರಾದವರು. ಅವರ ವಿರದ್ಧ ಪಿತೂರಿ ನಡೆಸಿ ಶಿಕ್ಷಿಸುವ ಕೆಲಸ ಕೆಲವರಿಂದ ಆಗಿರಬಹುದು," ಎಂದು ಅವರು ಹೇಳಿದ್ದಾರೆ. ಸಿಕೆ ರೌಲ್ಜಿ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಸಹ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಶಾಸಕರ ನಡೆಯನ್ನು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಆಡುವುದೊಂದು ಮಾಡುವುದೊಂದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತಂತ್ರೋತ್ಸವದ ಅಂಗವಾಗಿ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಪ್ರಧಾನಿ ಮಾತನಾಡಿದ್ದರು. ಅದು ಕಳೆದು ಕೆಲ ಗಂಟೆಗಳಲ್ಲಿ ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳು ಜೈಲಿನಿಂದ ಬಿಡುಗಡೆಹೊಂದಿದ್ದರು.

Follow Us:
Download App:
  • android
  • ios