Asianet Suvarna News Asianet Suvarna News

ಕೌಟುಂಬಿಕ ಹಿಂಸೆಗೆ ಆತ್ಮಹತ್ಯೆ: ‘ಪುರುಷರ ರಾಷ್ಟ್ರೀಯ ಆಯೋಗ’ ಸ್ಥಾಪಿಸಬೇಕೆಂಬ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂಕೋರ್ಟ್‌

33.2% ಪುರುಷರು ಕೌಟುಂಬಿಕ ಸಮಸ್ಯೆಗಳಿಂದಾಗಿ ಮತ್ತು 4.8% ಮದುವೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಈ ವರ್ಷ, ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

supreme court refuses to entertain pil for setting up of national commission for men ash
Author
First Published Jul 3, 2023, 3:48 PM IST

ದೆಹಲಿ (ಜುಲೈ 3, 2023): ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳನ್ನು ಎದುರಿಸಲು ಮಾರ್ಗಸೂಚಿಗಳನ್ನು ರೂಪಿಸಲು ಮತ್ತು ಅವರ ಹಿತಾಸಕ್ತಿಗಳನ್ನು ಕಾಪಾಡಲು “ಪುರುಷರಿಗಾಗಿ ರಾಷ್ಟ್ರೀಯ ಆಯೋಗ” ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಈ ವಿಷಯವನ್ನು ಪರಿಗಣಿಸಲು ನಿರಾಸಕ್ತಿ ವ್ಯಕ್ತಪಡಿಸಿತು.

ಅಲ್ಲದೆ, ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌ ‘’ನೀವು ಕೇವಲ ಏಕಪಕ್ಷೀಯ ಚಿತ್ರವನ್ನು ನೀಡಲು ಬಯಸುತ್ತೀರಿ. ಮದುವೆಯಾದ ಕೆಲವೇ ದಿನಗಳಲ್ಲಿ ಯುವತಿಯರು ಸಾಯುತ್ತಾರೆ ಎಂಬ ಡೇಟಾವನ್ನು ನೀವು ನಮಗೆ ನೀಡಬಹುದೇ?’’ ಎಂದು ಕೇಳಿದೆ. ಹಾಗೂ,  ಯಾರೂ ಆತ್ಮಹತ್ಯೆ ಮಾಡಿಕೊಳ್ಳಲು ಬಯಸುವುದಿಲ್ಲ, ಅದು ವೈಯಕ್ತಿಕ ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ ಎಂದೂ ಸರ್ವೋಚ್ಛ ನ್ಯಾಯಾಲಯದ ಪೀಠವು ಗಮನಿಸಿದೆ. 

ಇದನ್ನು ಓದಿ: ಸಿಲಿಕಾನ್‌ ಸಿಟಿ ಜನರೇ ಎಚ್ಚರ: ಮೆಟ್ರೋ ನಿಲ್ದಾಣದ ಬಳಿ ಸುಪ್ರೀಂಕೋರ್ಟ್‌ ವಕೀಲನ ಮೇಲೆ ಹಲ್ಲೆ, ಫೋನ್‌ ದೋಚಿದ ದರೋಡೆಕೋರರು

2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಅಂಕಿಅಂಶಗಳನ್ನು ಉಲ್ಲೇಖಿಸಿ ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ.  ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಮೃತಪಟ್ಟಿದ್ದು, ಅವರಲ್ಲಿ 81,063 ವಿವಾಹಿತ ಪುರುಷರು ಹಾಗೂ ವಿವಾಹಿತ ಮಹಿಳೆಯರ ಸಂಖ್ಯೆ 28,680 ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹಾಗೆ, "2021 ರಲ್ಲಿ 33.2% ಪುರುಷರು ಕೌಟುಂಬಿಕ ಸಮಸ್ಯೆಗಳಿಂದಾಗಿ ಮತ್ತು 4.8% ಮದುವೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಈ ವರ್ಷ ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದು ಸುಮಾರು 72% ಮತ್ತು ಒಟ್ಟು 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದು ಸುಮಾರು 27% ಆಗಿದೆ" ಎಂದು ಎನ್‌ಸಿಆರ್‌ಬಿ ಡೇಟಾವನ್ನು ಉಲ್ಲೇಳಿಸಿ ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆ ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆ ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯದಿಂದ ಬಳಲುತ್ತಿರುವ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‌ಎಚ್‌ಆರ್‌ಸಿ) ನಿರ್ದೇಶನಗಳನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ಡಿಕೆಶಿ ಸ್ಪಷ್ಟನೆ; ಪ್ರಾಧಿಕಾರ ರಚನೆಗೆ ಸುಪ್ರೀಂ ಡೆಡ್‌ಲೈನ್‌!

“ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದವರ ಅಥವಾ ಕೆಳಗಿರುವವರ ದೂರನ್ನು ಸ್ವೀಕರಿಸಲು ಪ್ರತಿ ಪೊಲೀಸ್ ಠಾಣೆಯ ಪೊಲೀಸ್ ಪ್ರಾಧಿಕಾರ/ಠಾಣಾಧಿಕಾರಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯದ ಮೂಲಕ ಸರಿಯಾದ ಮಾರ್ಗಸೂಚಿಗಳನ್ನು ನೀಡಲು ಪ್ರತಿವಾದಿ ನಂ.1 (ಭಾರತೀಯ ಒಕ್ಕೂಟ) ಗೆ ನಿರ್ದೇಶನವನ್ನು ನೀಡಿ. ಕೌಟುಂಬಿಕ ಸಮಸ್ಯೆಗಳು ಮತ್ತು ಮದುವೆ-ಸಂಬಂಧಿತ ಸಮಸ್ಯೆಗಳಿಂದಾಗಿ ಒತ್ತಡ, ಮತ್ತು ಭಾರತ ಸರ್ಕಾರವು ಸರಿಯಾದ ಶಾಸನವನ್ನು ಜಾರಿಗೊಳಿಸುವವರೆಗೆ ಅದರ ಸರಿಯಾದ ವಿಲೇವಾರಿಗಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅದನ್ನು ಉಲ್ಲೇಖಿಸಿ’’ ಎಂದೂ ಪಿಐಎಲ್‌ ಮೂಲಕ ಮನವಿ ಮಾಡಲಾಗಿತ್ತು.

“ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆಗಳು ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಕುರಿತು ಸಂಶೋಧನೆ ನಡೆಸಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ/ಶಿಫಾರಸು ನೀಡಿ ಮತ್ತು ರಾಷ್ಟ್ರೀಯ ಪುರುಷರ ಆಯೋಗದಂತಹ ವೇದಿಕೆಯನ್ನು ರೂಪಿಸಲು ಅಗತ್ಯ ವರದಿಗಳನ್ನು ಮಾಡಿ’’ ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಇದನ್ನೂ ಓದಿ: ಕೌಟುಂಬಿಕ ಹಿಂಸೆಯಿಂದ ಪುರುಷರ ಆತ್ಮಹತ್ಯೆ ತಡೆಗೆ ರಾಷ್ಟ್ರೀಯ ಪುರುಷರ ಆಯೋಗ?

Follow Us:
Download App:
  • android
  • ios