Asianet Suvarna News Asianet Suvarna News

ನ್ಯಾಯಾಂಗ, ಕೊಲಿಜಿಯಂ ವಿರುದ್ಧ ಹೇಳಿಕೆ: ಉಪರಾಷ್ಟ್ರಪತಿ ಧನಕರ್‌, ಸಚಿವ ರಿಜಿಜು ವಿರುದ್ಧ ಇಂದು ಸುಪ್ರಿಂಕೋರ್ಟ್‌ ವಿಚಾರಣೆ

ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಹಾಗೂ ಅಸಾನುದ್ದೀನ್‌ ಅಮಾನುಲ್ಲಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಲಿದೆ.

supreme court to hear plea seeking action against jagdeep dhankar kiren rijiju over remarks on judiciary ash
Author
First Published May 15, 2023, 9:14 AM IST

ನವದೆಹಲಿ (ಮೇ 15, 2023): ನ್ಯಾಯಾಂಗ ಮತ್ತು ಕೊಲಿಜಿಯಂ ಬಗ್ಗೆ ನೀಡಲಾದ ಹೇಳಿಕೆಗಳ ಸಂಬಂಧ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಮತ್ತು ಕೊಲಿಜಿಯಂ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮತ್ತು ಉಪಾಧ್ಯಕ್ಷ ಜಗದೀಪ್ ಧನಕರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆ ಇವರ ವಿರುದ್ಧ ಕ್ರಮ ಕೋರಿ ಬಾಂಬೆ ವಕೀಲರ ಸಂಘ ಈ ಹಿಂದೆ ಸಲ್ಲಿಸಿದ ಅರ್ಜಿ ಸಂವಿಧಾನದ 226ನೇ ವಿಧಿಯಡಿಯಲ್ಲಿ ರಿಟ್‌ ನ್ಯಾಯವ್ಯಾಪ್ತಿಗೆ ಒಳಪಡಲು ಈ ಪ್ರಕರಣವು ಯೋಗ್ಯವಾಗಿಲ್ಲ ಎಂದು ಬಾಂಬೆ ಹೈಕೋರ್ಟ್‌ ಫೆಬ್ರವರಿ 9 ರಂದು ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಸಂಘವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಇದನ್ನು ಓದಿ: ಸೂರತ್‌ ಕೋರ್ಟ್‌ನಲ್ಲಿ ಕೈ ಶಕ್ತಿ ಪ್ರದರ್ಶನ: ನ್ಯಾಯಾಲಯಕ್ಕೆ ಒತ್ತಡ ಹೇರುವ ಬಾಲಿಶ ಪ್ರಯತ್ನ ಎಂದ ಬಿಜೆಪಿ

ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್‌ ವೆಬ್‌ಸೈಟ್‌ ಮಾಹಿತಿ ನೀಡಿದೆ. ಧನಕರ್‌ ಹಾಗೂ ಕಿರಣ್‌ ರಿಜಿಜು ಸಂವಿಧಾನದಲ್ಲಿ ತಮ್ಮ ನಂಬಿಕೆ ಕೊರತೆಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅವರನ್ನು ತಮ್ಮ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸಂವಿಧಾನದ ಪರಿಚ್ಛೇದ 226 ರ ಅಡಿಯಲ್ಲಿ ರಿಟ್ ನ್ಯಾಯವ್ಯಾಪ್ತಿಯನ್ನು ಅನ್ವಯಿಸಲು ಇದು ಯೋಗ್ಯವಾದ ಪ್ರಕರಣವಲ್ಲ ಎಂಬ ಕಾರಣಕ್ಕಾಗಿ ತನ್ನ ಮನವಿಯನ್ನು ವಜಾಗೊಳಿಸಿದ ಬಾಂಬೆ ಹೈಕೋರ್ಟ್‌ ಫೆಬ್ರವರಿ 9 ರ ಆದೇಶವನ್ನು ಪ್ರಶ್ನಿಸಿ ವಕೀಲರ ಮಂಡಳಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ರಿಜಿಜು ಮತ್ತು ಧನಕರ್‌ ಅವರು ತಮ್ಮ ಹೇಳಿಕೆಗಳು ಮತ್ತು ನಡವಳಿಕೆಯಿಂದ ಸಂವಿಧಾನದಲ್ಲಿ ನಂಬಿಕೆಯ ಕೊರತೆಯನ್ನು ತೋರಿಸಿದ್ದಾರೆ ಎಂದು ಬಾಂಬೆ ವಕೀಲರ ಸಂಘ (ಬಿಎಲ್‌ಎ) ಹೇಳಿಕೊಂಡಿದೆ. ಅಲ್ಲದೆ, ಧನಕರ್ ಅವರನ್ನು ಉಪ ರಾಷ್ಟ್ರಪತಿ ಮತ್ತು ಕಿರಣ್‌ ರಿಜಿಜು ಅವರನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ಕರ್ತವ್ಯ ನಿರ್ವಹಿಸದಂತೆ ನಿರ್ಬಂಧಿಸಲು ಆದೇಶವನ್ನು ಕೋರಿತ್ತು.  ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕವಾಗಿ ನ್ಯಾಯಾಂಗದ ಮೇಲೆ ಮಾತ್ರವಲ್ಲದೆ ಸಂವಿಧಾನದ ಮೇಲೆ ಆಕ್ರಮಣಕಾರಿ ವರ್ತನೆ ತೋರಿದ್ದು, ಇದು ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಕಡಿಮೆ ಮಾಡಿದೆ ಎಂದು ಮೇಲ್ಮನವಿಯಲ್ಲಿ ಅವರು ಹೇಳಿದರು.

ಇದನ್ನೂ ಓದಿ: ರಾಜಕೀಯ ಹಿನ್ನೆಲೆಯವರಿಗೆ ಜಡ್ಜ್‌ ಹುದ್ದೆ: ರಿಜಿಜು ಸಮರ್ಥನೆ; ಮದ್ರಾಸ್‌ ಹೈಕೋರ್ಟ್‌ಗೆ ಗೌರಿ ನೇಮಕ ಹಿನ್ನೆಲೆ ಸುಪ್ರೀಂ ವಿಚಾರಣೆ

ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯು ಪಾರದರ್ಶಕವಾಗಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹೇಳಿದ್ದರು. ಇನ್ನು, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು 1973 ರ ಕೇಶವಾನಂದ ಭಾರತಿ ತೀರ್ಪಿನ ಮೂಲ ರಚನೆಯ ಸಿದ್ಧಾಂತವನ್ನು ನೀಡಿದ ಪ್ರಮುಖ ತೀರ್ಪನ್ನು ಪ್ರಶ್ನಿಸಿದ್ದರು. ಈ ತೀರ್ಪು ಕೆಟ್ಟ ನಿದರ್ಶನವನ್ನು ನಿರ್ಮಿಸಿದೆ ಎಂದಿದ್ದರು. ಹಾಗೂ, ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಯಾವುದೇ ಅಧಿಕಾರ ಪ್ರಶ್ನಿಸಿದರೆ, "ನಾವು ಪ್ರಜಾಪ್ರಭುತ್ವ ರಾಷ್ಟ್ರ" ಎಂದು ಹೇಳುವುದು ಕಷ್ಟ ಎಂದೂ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಹೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ಗೆ 5 ಜಡ್ಜ್‌ಗಳ ನೇಮಕ: ಸುಪ್ರೀಂ ಅತೃಪ್ತಿ ಬೆನ್ನಲ್ಲೇ ಕೇಂದ್ರ ಸರ್ಕಾರ ಅಸ್ತು

Follow Us:
Download App:
  • android
  • ios