ರಾಜಸಂಸ್ಥಾನವಾಗಿದ್ದ ಜಮ್ಮು-ಕಾಶ್ಮೀರವು, ದೇಶ ವಿಭಜನೆ ಬಳಿಕ ಪಾಕಿಸ್ತಾನ ಬದಲಿಗೆ ಭಾರತಕ್ಕೆ ಸೇರ್ಪಡೆಯಾಗಿತ್ತು. ಇದಕ್ಕಾಗಿ ಈ ರಾಜ್ಯಕ್ಕೆ 1949ರಲ್ಲಿ ಪರಿಚ್ಛೇದ 370ರ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಇದರಿಂದ ಪ್ರತ್ಯೇಕ ಸಂವಿಧಾನ, ಧ್ವಜದ ಅಧಿಕಾರ ಕಣಿವೆ ರಾಜ್ಯಕ್ಕೆ ಲಭಿಸಿತ್ತು.

ನವದೆಹಲಿ (ಡಿಸೆಂಬರ್ 11, 2023): ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಪ್ರಶ್ನಿಸಿದ್ದ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್‌ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಲಿದೆ. 2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿತ್ತು. ಇದೇ ವೇಳೆ ಕಾಶ್ಮೀರವನ್ನು ವಿಭಜಿಸಿ, ಪ್ರತ್ಯೇಕ ಲಡಾಖ್‌ ಕೇಂದ್ರಾಡಳಿತ ಪ್ರದೇಶವನ್ನೂ ಸೃಷ್ಟಿಸಲಾಗಿತ್ತು ಹಾಗೂ ಲಡಾಖ್‌ ಮತ್ತು ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಸಾರಲಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ಈ ಕ್ರಮದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ 23 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ 16 ದಿನ ಇವುಗಳ ವಿಚಾರಣೆ ನಡೆಸಿತ್ತು. ಸುದೀರ್ಘ ವಾದ-ಪ್ರತಿವಾದದ ಬಳಿಕ ನ್ಯಾಯಪೀಠ ಸೆಪ್ಟೆಂಬರ್ 5ರಂದು ತೀರ್ಪು ಕಾಯ್ದಿರಿಸಿತ್ತು. ಇದರ ಅಂತಿಮ ತೀರ್ಪು ಸೋಮವಾರ ಹೊರಬೀಳಲಿದೆ.

News Hour: ಸೋಮವಾರ ಸುಪ್ರೀಂನಲ್ಲಿ ಆರ್ಟಿಕಲ್ 370 ಭವಿಷ್ಯ!

ಭಾರಿ ಬಿಗಿ ಭದ್ರತೆ:
ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಪ್ರಕ್ಷುಬ್ಧ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ತೀರ್ಪು ಏನೇ ಬಂದರೂ ಪರ-ವಿರೋಧ ಗುಂಪುಗಳು ಬೀದಿಗಿಳಿಯುವ ಸಂಭವವಿದೆ. ಹೀಗಾಗಿ ಜಮ್ಮು-ಕಾಶ್ಮೀರದಾದ್ಯಂತ ಭಾರಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಏನಿದು ಕಾಶ್ಮೀರ ವಿಶೇಷ ಸ್ಥಾನಮಾನ?
ರಾಜಸಂಸ್ಥಾನವಾಗಿದ್ದ ಜಮ್ಮು-ಕಾಶ್ಮೀರವು, ದೇಶ ವಿಭಜನೆ ಬಳಿಕ ಪಾಕಿಸ್ತಾನ ಬದಲಿಗೆ ಭಾರತಕ್ಕೆ ಸೇರ್ಪಡೆಯಾಗಿತ್ತು. ಇದಕ್ಕಾಗಿ ಈ ರಾಜ್ಯಕ್ಕೆ 1949ರಲ್ಲಿ ಪರಿಚ್ಛೇದ 370ರ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಇದರಿಂದ ಪ್ರತ್ಯೇಕ ಸಂವಿಧಾನ, ಧ್ವಜದ ಅಧಿಕಾರ ಕಣಿವೆ ರಾಜ್ಯಕ್ಕೆ ಲಭಿಸಿತ್ತು.

ಡಿ.11ಕ್ಕೆ ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದು ಭವಿಷ್ಯ, ತೀರ್ಪು ಪ್ರಕಟಿಸಲಿದೆ ಸುಪ್ರೀಂ ಕೋರ್ಟ್!

ರಕ್ಷಣೆ, ವಿದೇಶಾಂಗ ವ್ಯವಹಾರ, ಹಣಕಾಸು, ಸಂಪರ್ಕ ಹೊರತಾಗಿ ಯಾವುದೇ ಭಾರತೀಯ ಕಾನೂನು ಕಾಶ್ಮೀರಕ್ಕೆ ಅನ್ವಯವಾಗದಂತೆ ವಿಶೇಷ ಸ್ಥಾನಮಾನ ರಕ್ಷಣೆ ಒದಗಿಸಿತ್ತು. ಸಿಆರ್‌ಪಿಸಿಗೆ ಪರ್ಯಾಯವಾದ ರಣಬೀರ್ ದಂಡ ಸಂಹಿತೆ ಎಂಬ ಕಾನೂನು ಅಲ್ಲಿತ್ತು. ಆದರೆ ಇಡೀ ಶೇಷ ಭಾರತಕ್ಕೆ ಒಂದು ಕಾನೂನು, ಕಾಶ್ಮೀರಕ್ಕೆ ಒಂದು ಕಾನೂನು ಏಕೆ ಎಂದು ಪ್ರಶ್ನಿಸಿದ್ದ ಮೋದಿ ಸರ್ಕಾರ, 2019ರ ಆಗಸ್ಟ್ 5ರಂದು ಈ ವಿಷೇಷ ಸ್ಥಾನಮಾನ ರದ್ದು ಮಾಡಿತ್ತು. ಅಂದಿನಿಂದ ಈ ಮೇಲ್ಕಾಣಿಸಿದ ಎಲ್ಲ ಕಾಶ್ಮೀರದ ವಿಶೇಷ ಸವಲತ್ತುಗಳು ರದ್ದಾಗಿದ್ದವು.

ಐತಿಹಾಸಿಕ ಬಿಲ್; J&K ಅಸೆಂಬ್ಲಿಯಲ್ಲಿ ಕಾಶ್ಮೀರಿ ಪಂಡಿತರು, PoK ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದ ಕೇಂದ್ರ!