ಸುಪ್ರೀಂಕೋರ್ಟ್‌ನ ತೀರ್ಪನ್ನು ಐತಿಹಾಸಿಕ ಹಾಗೂ ಮಹತ್ವದ್ದು ಎಂದು ಬಿಜೆಪಿ ನಾಯಕ ಹಾಗೂ ಪರಿಣಮ್ ಲಾ ಅಸೋಸಿಯೇಟ್ಸ್‌ ಮ್ಯಾನೇಜಿಂಗ್ ಪಾರ್ಟ್ನರ್ ಹಿತೇಶ್‌ ಜೈನ್‌ ಹೇಳಿದ್ದಾರೆ.

ಹೊಸದೆಹಲಿ (ಅಕ್ಟೋಬರ್ 17, 2023): ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ಪರಿಣಮ್ ಲಾ ಅಸೋಸಿಯೇಟ್ಸ್‌ ಮ್ಯಾನೇಜಿಂಗ್ ಪಾರ್ಟ್ನರ್ ಹಿತೇಶ್‌ ಜೈನ್‌ ಸರಣಿ ಟ್ವೀಟ್‌ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನ ತೀರ್ಪನ್ನು ಐತಿಹಾಸಿಕ ಹಾಗೂ ಮಹತ್ವದ್ದು ಎಂದು ಬಣ್ಣಿಸಿರುವ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇಂದು, ಭಾರತದ ಸರ್ವೋಚ್ಚ ನ್ಯಾಯಾಲಯವು ಸಲಿಂಗ ದಂಪತಿ ನಡುವಿನ ವಿವಾಹವನ್ನು ಕಾನೂನುಬದ್ಧಗೊಳಿಸುವುದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಮತ್ತು ಮಹತ್ವದ ತೀರ್ಪನ್ನು ನೀಡಿದೆ ಎಂದು ಬಿಜೆಪಿ ನಾಯಕ ಹಿತೇಶ್‌ ಜೈನ್‌ ಟ್ವೀಟ್‌ ಮಾಡಿದ್ದಾರೆ. 

ಇದನ್ನು ಓದಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Scroll to load tweet…

ಅರ್ಜಿದಾರರು ವಿಶೇಷ ವಿವಾಹ ಕಾಯಿದೆ 1954 ಮತ್ತು ಹಿಂದೂ ವಿವಾಹ ಕಾಯಿದೆ 1955 ರಂತಹ ಹಲವಾರು ಶಾಸನಗಳನ್ನು ಪ್ರಶ್ನಿಸಿದ್ದರು. ಆದರೆ, ಈ ಕಾಯ್ದೆಗಳು ಸಲಿಂಗ ಒಕ್ಕೂಟಗಳನ್ನು ಗುರುತಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಅಲ್ಲದೆ, ಭಾರತದ ಸರ್ವೋಚ್ಚ ನ್ಯಾಯಾಲಯವು ವಿವಾಹವು ಮೂಲಭೂತ ಹಕ್ಕಲ್ಲ ಎಂಬುದನ್ನು ಸರ್ವಾನುಮತದಿಂದ ಎತ್ತಿಹಿಡಿದಿದೆ. ಹಾಗೂ, ಈ ಅರ್ಜಿಯ ಪ್ರಮುಖ ಸವಾಲು ಅಂದರೆ ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಅನ್ನು ಕೂಡ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ತಿರಸ್ಕರಿಸಿಲ್ಲ.

ಈ ಮಧ್ಯೆ, ವಿಶೇಷ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದರೆ ಅದು ದೇಶವನ್ನು ಸ್ವಾತಂತ್ರ್ಯ ಪೂರ್ವ ಯುಗಕ್ಕೆ ಕೊಂಡೊಯ್ಯುತ್ತದೆ ಎಂದೂ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ವೇಳೆ, ನ್ಯಾಯಾಲಯವು ಎರಡನೇ ವಿಧಾನವನ್ನು ಅಮದರೆ ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಟ್ಟಿದ್ದರೆ, ಮತ್ತು ವಿಶೇಷ ವಿವಾಹ ಕಾಯ್ದೆಯನ್ನು ತೆಗೆದುಹಾಕಿದ್ದರೆ, ನ್ಯಾಯಾಂಗ, ಶಾಸಕಾಂಗದ ಪಾತ್ರವನ್ನು ವಹಿಸಿಕೊಳ್ಳುತ್ತಿತ್ತು ಎಂದೂ ಬಿಜೆಪಿ ನಾಯಕ ಹಾಗೂ ಪರಿಣಮ್ ಲಾ ಅಸೋಸಿಯೇಟ್ಸ್‌ ಮ್ಯಾನೇಜಿಂಗ್ ಪಾರ್ಟ್ನರ್ ಹಿತೇಶ್‌ ಜೈನ್‌ ಹೇಳಿದ್ದಾರೆ.

ಇದನ್ನು ಓದಿ: ಸಲಿಂಗಕಾಮ ಒಂದು ‘ಕಾಯಿಲೆ’: ಆರೆಸ್ಸೆಸ್‌ ಸಹವರ್ತಿ ಸಂಘಟನೆ; ದೇಶದ ವೈದ್ಯರನ್ನು ಸಂದರ್ಶಿಸಿ ಅಧ್ಯಯನ

ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ ಎಂದೂ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಇದರಲ್ಲಿ ಬದಲಾವಣೆ ಮಾಡಿದರೆ, ಭಿನ್ನಲಿಂಗೀಯ ದಂಪತಿ ಆನಂದಿಸಿದಂತೆ ತೆರಿಗೆ ಪ್ರಯೋಜನಗಳು, ದತ್ತು ಮತ್ತು ಉತ್ತರಾಧಿಕಾರದಂತಹ ಮದುವೆಯಿಂದ ಉಂಟಾಗುವ ಪ್ರಯೋಜನಗಳನ್ನು ಪಡೆಯಲು ಸಲಿಂಗ ದಂಪತಿ ಸಹ ಬಯಸಿದ್ದರು ಎಂಬುದು ಈ ವಿಷಯದ ತಿರುಳಿನಲ್ಲಿ ಅಡಗಿದೆ ಎಂದು ಸಹ ಹಿತೇಶ್‌ ಜೈನ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. 

ಇನ್ನೊಂದೆಡೆ, ಸಲಿಂಗ ದಂಪತಿ ಕೆಲವು ಹಕ್ಕುಗಳನ್ನು ಹೊಂದಿದ್ದರೂ, ಈ ಹಕ್ಕುಗಳನ್ನು ಶಾಸಕಾಂಗವು ಚರ್ಚಿಸಬೇಕು. ಆದ್ದರಿಂದ, ಅಂತಹ ವಿಷಯಗಳನ್ನು ನಿರ್ಧರಿಸಲು ನ್ಯಾಯಾಲಯಗಳಿಗೆ ಅಧಿಕಾರವಿಲ್ಲ ಎಂದೂ ಕೇಂದ್ರ ಸರ್ಕಾರ ವಾದಿಸಿತ್ತು.

ಜತೆಗೆ, ಕ್ವೀರ್ ಯೂನಿಯನ್‌ಗಳಲ್ಲಿನ ವ್ಯಕ್ತಿಗಳ ಹಕ್ಕುಗಳು ಮತ್ತು ಅರ್ಹತೆ ನಿರ್ಧರಿಸಲು ಕೇಂದ್ರ ಸರ್ಕಾರವು ಸಮಿತಿಯನ್ನು ರಚಿಸುತ್ತದೆ ಎಂದು ಸಾಲಿಸಿಟರ್ ಜನರಲ್ ಸಲ್ಲಿಸಿದ ಹೇಳಿಕೆಯನ್ನು ಸಹ ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಸಮಿತಿಯು ಪಡಿತರ ಕಾರ್ಡ್‌ಗಳಲ್ಲಿ ಕ್ವೀರ್ ದಂಪತಿಯನ್ನು ಕುಟುಂಬವಾಗಿ ಸೇರಿಸುವುದು, ಕ್ವೀರ್ ದಂಪತಿ ಜಂಟಿ ಬ್ಯಾಂಕ್ ಖಾತೆಗೆ ನಾಮನಿರ್ದೇಶನ ಮಾಡಲು ಅನುವು ಮಾಡಿಕೊಡುತ್ತದೆ. ಪಿಂಚಣಿ, ಗ್ರಾಚ್ಯುಟಿ ಇತ್ಯಾದಿ ಹಕ್ಕುಗಳನ್ನು ನೀಡುವ ಬಗ್ಗೆ ಪರಿಶೀಲಿಸಲಿದೆ ಎಂದೂ ತಿಳಿದುಬಂದಿದೆ.

ಇದನ್ನೂ ಓದಿ: ಸಲಿಂಗ ವಿವಾಹದ ವಿಚಾರಣೆ ಕೈಬಿಡಿ; ನಿರ್ಧಾರದ ಹೊಣೆಯನ್ನು ಸಂಸತ್ತಿಗೆ ಬಿಡಿ: ಬಾರ್‌ ಕೌನ್ಸಿಲ್‌ ಮನವಿ

ಅಲ್ಲದೆ, ವಿಷಯದ ಸೂಕ್ಷ್ಮತೆಯನ್ನು ಪರಿಗಣಿಸಿದೆ ಮತ್ತು ವಿಲಕ್ಷಣ ಹಕ್ಕುಗಳನ್ನು ರಕ್ಷಿಸುವ ಬಗ್ಗೆಯೂ ಕೇಂದ್ರ ಸರ್ಕಾರ ಸಲಹೆ ನೀಡಿದೆ ಎಂದು ಬಿಜೆಪಿ ನಾಯಕ ಹಾಗೂ ಪರಿಣಮ್ ಲಾ ಅಸೋಸಿಯೇಟ್ಸ್‌ ಮ್ಯಾನೇಜಿಂಗ್ ಪಾರ್ಟ್ನರ್ ಹಿತೇಶ್‌ ಜೈನ್‌ ಸರಣಿ ಟ್ವೀಟ್‌ ಮಾಡಿದ್ದಾರೆ.