ಇವಿಎಂ ಮತಗಳ ಸಂಪೂರ್ಣ ವಿವಿಪ್ಯಾಟ್ ಪರಿಶೀಲನೆಗಾಗಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದಿದ್ದಾರೆ. ಮೊದಲು ದೇಶದ ಕ್ಷಮೆ ಕೇಳುವಂತೆ ಸೂಚನೆ ನೀಡಿದ್ದಾರೆ.

ನವದೆಹಲಿ (ಏ.26): ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಇವಿಎಂ ಬಳಸಿ ಚಲಾವಣೆಯಾದ ಮತಗಳ ಅಡ್ಡ ಪರಿಶೀಲನೆಗೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆ ಮೂಲಕ ಸುಪ್ರೀಂ ಕೋರ್ಟ್‌ ವಿರೋಧ ಪಕ್ಷದ ನಾಯಕ ಕೆನ್ನೆಗೆ ಬಲವಾಗಿ ಬಾರಿಸಿದೆ ಎಂದು ಮೋದಿ ಶುಕ್ರವಾರ ಹೇಳಿದ್ದಾರೆ. ಇದೇ ವೇಳೆ ಪ್ರತಿಪಕ್ಷಗಳು ಮೊದಲು ದೇಶದ ಕ್ಷಮೆ ಕೇಳಬೇಕು ಎಂದು ಮೋದಿ ಆಗ್ರಹಿಸಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. "ಇಂದು ನಮ್ಮ ಪ್ರಜಾಪ್ರಭುತ್ವಕ್ಕೆ ಮಂಗಳಕರ ದಿನವಾಗಿದೆ. ಇವಿಎಂ ವಿಚಾರದಲ್ಲಿ ಅಳುತ್ತಿದ್ದ ಪ್ರತಿಪಕ್ಷಗಳ ಮುಖಕ್ಕೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ" ಎಂದು ಪ್ರಧಾನಿ ಹೇಳಿದರು. ಅವರು ರಾಷ್ಟ್ರದ ಕ್ಷಮೆ ಕೇಳಬೇಕು ಎಂದು ಮೋದಿ ಆಗ್ರಹಿಸಿದ್ದಾರೆ.

"ಜಗತ್ತು ನಮ್ಮ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೊಗಳುತ್ತಿರುವಾಗ, ಪ್ರತಿಪಕ್ಷಗಳು ತಮ್ಮ ವೈಯಕ್ತಿಕ ಲಾಭಕ್ಕಾಗಿ ಅದನ್ನು ದೂಷಿಸುತ್ತಿವೆ" ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಇಂದು ಮುಂಜಾನೆ, ಸುಪ್ರೀಂ ಕೋರ್ಟ್ ಶುಕ್ರವಾರ ವಿವಿಪ್ಯಾಟ್‌ನೊಂದಿಗೆ ಇವಿಎಂಗಳನ್ನು ಬಳಸಿ ಚಲಾಯಿಸಿದ ಮತಗಳ ಸಂಪೂರ್ಣ ಕ್ರಾಸ್-ವೆರಿಫಿಕೇಶನ್ ಕೋರಿ ಸಲ್ಲಿಸಿದ ಮನವಿಗಳನ್ನು ತಿರಸ್ಕರಿಸಿತು ಮತ್ತು ವ್ಯವಸ್ಥೆಯ ಬಗ್ಗೆ ಕುರುಡು ಅಪನಂಬಿಕೆಯ ಯಾವುದೇ ಅಂಶವು ಅನಗತ್ಯ ಸಂದೇಹವನ್ನು ಉಂಟುಮಾಡಬಹುದು ಎಂದು ಹೇಳಿದೆ.

Add Asianetnews Kannada as a Preferred SourcegooglePreferred

ಸಣ್ಣ ರಾಜಕಾರಣಿಯಂತೆ ಮೋದಿ ವರ್ತನೆ: ಖರ್ಗೆ ಆಕ್ರೋಶ

"ಪ್ರಜಾಪ್ರಭುತ್ವವೆಂದರೆ ಎಲ್ಲಾ ಸಂಸ್ಥೆಗಳ ನಡುವೆ ಸಾಮರಸ್ಯ ಮತ್ತು ವಿಶ್ವಾಸವನ್ನು ನಿರ್ಮಿಸಲು ಶ್ರಮಿಸುವುದು" ಎಂದು ಸಮರ್ಥಿಸಿಕೊಂಡ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಎರಡು ಏಕರೂಪದ ತೀರ್ಪುಗಳನ್ನು ನೀಡಿತು ಮತ್ತು ಮತಪತ್ರಗಳಿಗೆ ಹಿಂತಿರುಗಲು ಬಯಸುವ ಅರ್ಜಿಗಳು ಸೇರಿದಂತೆ ಎಲ್ಲಾ ಮನವಿಗಳನ್ನು ವಜಾಗೊಳಿಸಿತು.

ಕರ್ನಾಟಕ Election 2024 Live: ಮತದಾನಕ್ಕೆ ಇನ್ನು ಮೂರು ಗಂಟೆ ಬಾಕಿ, ನಿಮ್ಮ ಹಕ್ಕು ಚಲಾಯಿಸಿ