ಆತ್ಮೀಯ ಅಪ್ಪುಗೆಯೊಂದಿಗೆ ಅಜಿತ್ ಪವಾರ್ ಬರಮಾಡಿಕೊಂಡ ಸುಪ್ರಿಯಾ ಸುಳೆ| ಬಿಜೆಪಿ ಸಾಂಗತ್ಯ ತೊರೆದ ಅಜಿತ್ ಪವಾರ್‌ಗೆ ಆತ್ಮೀಯ ಸ್ವಾಗತ| ಕ್ಷಮಿಸಿದ್ದೀನಿ ಬಾ ಎಂದು ಅಜಿತ್ ಅವರನ್ನು ಅಪ್ಪಿಕೊಂಡ ಸುಪ್ರಿಯಾ ಸುಳೆ| ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದ ಅಜಿತ್ ಪವಾರ್| ಎನ್‌ಸಿಪಿಯಲ್ಲೇ ಮುಂದುವರೆಯುವುದಾಗಿ ಅಜಿತ್ ಪವಾರ್ ಸ್ಪಷ್ಟನೆ| 

ಮುಂಬೈ(ನ.27): ಎನ್‌ಸಿಪಿ ಹಾಗೂ ಶರದ್ ಪವಾರ್ ಅವರಿಗೆ ಸಡ್ಡು ಹೊಡೆದು ಬಿಜೆಪಿ ಜೊತೆ ಸರ್ಕಾರ ರಚಿಸಿದ್ದ ಅಜಿತ್ ಪವಾರ್ ಇದೀಗ ಮರಳಿ ಎನ್‌ಸಿಪಿ ಗೂಡಿಗೆ ಸೇರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿರುವ ಅಜಿತ್ ಪವಾರ್, ಶರದ್ ಪವಾರ್ ನಿರ್ಣಯದ ವಿರುದ್ಧ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿದ್ದಾರೆ.

Scroll to load tweet…

ಇನ್ನು ಬಿಜೆಪಿ ಸಾಂಗತ್ಯ ತೊರೆದು ಮರಳಿ ಎನ್‌ಸಿಪಿ ಮೂಲ ಬಣ ಸೇರಿದ ಅಜಿತ್ ಪವಾರ್ ಅವರನ್ನು, ಸುಪ್ರಿಯಾ ಸುಳೆ ಆತ್ಮೀಯ ಅಪ್ಪುಗೆಯೊಂದಿಗೆ ಬರಮಾಡಿಕೊಂಡಿದ್ದಾರೆ.

ಬಂಡೆದ್ದ ಅಜಿತ್‌ ಮನವೊಲಿಸಿದ್ದು ಈ ಪತಿ-ಪತ್ನಿ!

ಪಕ್ಷದ ಕಚೇರಿಯಲ್ಲಿ ಅಜಿತ್ ಪವಾರ್ ಅವರನ್ನು ಕಂಡೊಡನೆ 'ಬಾರೋ ಕ್ಷಮಿಸಿದ್ದೀನಿ..' ಎಂದು ಹೇಳುವ ಮೂಲಕ ಸುಪ್ರಿಯಾ ಆತ್ಮೀಯ ಅಪ್ಪುಗೆ ನೀಡಿದರು. ಈ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಬಿಜೆಪಿಗೆ ಸೆಟ್ ಬ್ಯಾಕ್: ರಾಜೀನಾಮೆ ನೀಡಿ ಅಜಿತ್ ಪವಾರ್ ಕಮ್ ಬ್ಯಾಕ್!
ಈ ವೇಳೆ ಮಾತನಾಡಿದ ಅಜಿತ್ ಪವಾರ್, ನನ್ನನ್ನು ಯಾರೂ ಪಕ್ಷದಿಂದ ಉಚ್ಛಾಟಿಸಿಲ್ಲ, ಹೀಗಾಗಿ ನಾನು ಪಕ್ಷಕ್ಕೆ ಮರಳಿ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ನಾನು ಎನ್‌ಸಿಪಿಯಲ್ಲೇ ಇದ್ದು, ಎನ್‌ಸಿಪಿಯಲ್ಲೇ ಮುಂದುವರೆಯುತ್ತೇನೆ ಎಂದು ಅಜಿತ್ ಸ್ಪಷ್ಟಪಡಿಸಿದರು.

Scroll to load tweet…

ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವನ ಸ್ವೀಕರಿಸಿದ್ದ ಅಜಿತ್ ಪವಾರ್ ನಡೆಯನ್ನು ಟೀಕಿಸಿದ್ದ ಸುಪ್ರಿಯಾ, ಅಜಿತ್ ಪಕ್ಷ ಹಾಗೂ ಕುಟುಂಬ ಎರಡನ್ನೂ ಒಡೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. 

ಪಕ್ಷ, ಕುಟುಂಬ ಒಡೆದಿದೆ: ಸುಪ್ರಿಯಾ ಸುಳೆ ವಾಟ್ಸಪ್ ಸ್ಟೇಟಸ್!