ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಅವರು ಭಾರತದ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದು ರದ್ದು| ಸುರಿನೇಮ್ ಅಧ್ಯಕ್ಷ ಚಂದ್ರಿಕಾಪ್ರಸಾದ್ ಗಣರಾಜ್ಯೋತ್ಸವ ಅತಿಥಿ
ನವದೆಹಲಿ(ಜ.11): ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಅವರು ಭಾರತದ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ, ಸುರಿನೇಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರಿಗೆ ಈ ಭಾಗ್ಯ ಒಲಿದುಬಂದಿದೆ ಎಂದು ಮೂಲಗಳು ಹೇಳಿವೆ.
ಸಂತೋಖಿ ಅವರು ಕಳೆದ ವಾರ ಪ್ರವಾಸಿ ಭಾರತೀಯ ದಿವಸದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಗಣರಾಜ್ಯ ದಿನದ ಅತಿಥಿಯಾಗಿ ಪಾಲ್ಗೊಳ್ಳುವ ಆಹ್ವಾನವೂ ಹೋಗಿದೆ ಎಂದು ತಿಳಿದುಬಂದಿದೆ.
ಸುರಿನೇಮ್ ಈ ಮುನ್ನ ಡಚ್ ವಸಾಹತು ಆಗಿತ್ತು. ಇಲ್ಲಿ ಭಾರತೀಯ ಮೂಲದವರ ಸಂಖ್ಯೆಯೇ ಶೇ.27.4ರಷ್ಟಿದೆ. ಸಂತೋಖಿ ಅವರು ಕಳೆದ ಜುಲೈನಲ್ಲಿ ಡೇಸಿ ಬೌಟೆರ್ಸೆ ಎಂಬ ಸರ್ವಾಧಿಕಾರಿಯ ಆಳ್ವಿಕೆಗೆ ಅಂತ್ಯ ಹಾಡಿ ಅಧಿಕಾರಕ್ಕೆ ಬಂದಿದ್ದರು
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 11, 2021, 12:22 PM IST