Asianet Suvarna News Asianet Suvarna News

ಶಾಸಕರ ಕಾರು ಡಿಕ್ಕಿ, 22 ಜನಕ್ಕೆ ಗಾಯ, ಐವರ ಸ್ಥಿತಿ ಗಂಭೀರ!

* ಒಡಿಶಾದಲ್ಲೊಂದು ಲಖೀಂಪುರ ಮಾದರಿ ಘಟನೆ

* ಶಾಸಕರ ಕಾರು ಡಿಕ್ಕಿ, 22 ಂಂದಿಗೆ ಗಾಐ, ಐವರ ಸ್ಥಿತಿ ಗಂಭೀರ

Suspended Odisha MLA Car Runs Into Crowd, 22 Injured pod
Author
Bangalore, First Published Mar 13, 2022, 7:44 AM IST

ಭುವನೇಶ್ವರ(ಮಾ.13):  ಒಡಿಶಾದ ಚಿಲಿಕಾ ಕ್ಷೇತ್ರದ ಶಾಸಕ ಪ್ರಶಾಂತ್‌ ಜಗದೇವ್‌ ಪ್ರಯಾಣಿಸುತ್ತಿದ್ದ ವಾಹನ, ಜನರ ಗುಂಪಿನ ಮೇಲೆ ಹರಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 7 ಪೊಲೀಸರು ಸೇರಿದಂತೆ ಇತರೆ 22 ಜನರು ಗಾಯಗೊಂಡ ಘಟನೆ ಖುರ್ದಾ ಜಿಲ್ಲೆಯ ಬನಪುರ್‌ ಎಂಬಲ್ಲಿ ನಡೆದಿದೆ. ಗಾಯಗೊಂಡವರ ಪೈಕಿ ಪೊಲೀಸ್‌ ಇನ್‌ಸ್ಟೆಕ್ಟರ್‌ ಸೇರಿದಂತೆ 5 ಜನರ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯ ಸಂಸ್ಥೆಯೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬನಪುರ್‌ ಬಿಡಿಒ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಈ ವೇಳೆ ವೇಗವಾಗಿ ಬಂದ ಶಾಸಕರ ಕಾರು ಜನರ ಗುಂಪಿನ ಮೇಲೆ ಹರಿದಿದೆ. ಘಟನೆಯಿಂದ ಉದ್ರಿಕ್ತಗೊಂಡ ಗುಂಪು ಶಾಸಕರ ಮೇಲೆ ಹಲ್ಲೆ ಮಾಡಿದೆ. ಹಲ್ಲೆಯಲ್ಲಿ ಶಾಸಕ ಪ್ರಶಾಂತ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಭುವನೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಬಿಜೆಪಿಯ 15ಜನ ಕಾರ್ಯಕರ್ತರು ಗಾಯಗೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಪ್ರಶಾಂತ್‌ ಜಗದೇವ್‌ ಅವರನ್ನು ಕಳೆದ ವರ್ಷ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಅಮಾನತು ಗೊಳಿಸಲಾಗಿತ್ತು.

ಇತ್ತೀಚೆಗೆ ಉತ್ತರಪ್ರದೇಶದ ವಿಧಾನಸಭಾ ಚುನಾವಣೆ ವೇಳೆ ಲಖೀಂಪುರ ಖೇರಿಯಲ್ಲೂ ಇಂಥದ್ದೇ ಘಟನೆ ನಡೆದು ನಾಲ್ವರು ಸಾವನ್ನಪ್ಪಿದ್ದರು.

Follow Us:
Download App:
  • android
  • ios