ಯೋಗಿ ಆದಿತ್ಯನಾಥ್ ಅವರ ತ್ರಿಭಾಷಾ ನೀತಿ ಹೇಳಿಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. 

ತ್ರಿಭಾಷಾ ನೀತಿಯ ಕುರಿತು ಯೋಗಿ ಆದಿತ್ಯನಾಥ್ ಅವರು ಎಎನ್ಐಗೆ ನೀಡಿದ ಸಂದರ್ಶನದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿಎಂ ಯೋಗಿ ಸುದ್ದಿಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ನೀಡಿದ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಸ್ಟಾಲಿನ್, ದ್ವಿಭಾಷಾ ನೀತಿ ಮತ್ತು ನ್ಯಾಯಯುತ ಗಡಿ ನಿರ್ಣಯದ ಬಗ್ಗೆ ತಮಿಳುನಾಡಿನ ಪ್ರತಿಧ್ವನಿಸುವ ಧ್ವನಿಯು ಬಿಜೆಪಿಯನ್ನು ಕಿರಿಕಿರಿಗೊಳಿಸಿದೆ ಎಂದು ಸ್ಟಾಲಿನ್ ಬರೆದುಕೊಂಡಿದ್ದಾರೆ. 

Add Asianetnews Kannada as a Preferred SourcegooglePreferred

ಯೋಗಿ ಆದಿತ್ಯನಾಥ್ ಅವರು ದ್ವೇಷದ ಬಗ್ಗೆ ನಮಗೆ ಉಪನ್ಯಾಸ ನೀಡಲು ಬಯಸುತ್ತಿದ್ದಾರೆಯೇ? ನಮ್ಮನ್ನು ಬಿಡಿ. ಇದು ವ್ಯಂಗ್ಯವಲ್ಲ ಇದು ಅತ್ಯಂತ ಕರಾಳ ರಾಜಕೀಯ ಕಪ್ಪು ಹಾಸ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ತಮಿಳುನಾಡು ರಾಜ್ಯವು ಯಾವುದೇ ನಿರ್ದಿಷ್ಟ ಭಾಷೆಯನ್ನಲ್ಲ, 'ಭಾಷಾ ಹೇರಿಕೆ' ಮತ್ತು 'ಜನಾಂಗೀಯತೆ'ಯನ್ನು ವಿರೋಧಿಸುತ್ತಿದೆ. ಇದು ವೋಟ್‌ ಬ್ಯಾಂಕ್ ರಾಜಕೀಯ ಅಲ್ಲ, ಇದು ಘನತೆ ಮತ್ತು ನ್ಯಾಯಕ್ಕಾಗಿ ಹೋರಾಟ ಎಂದು ಸ್ಟಾಲಿನ್ ಅವರು ಕರೆದಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ, ಸ್ಟಾಲಿನ್ ತಮ್ಮ ಮತ ಬ್ಯಾಂಕ್ ಅಪಾಯದಲ್ಲಿದೆ ಎಂದು ಭಾವಿಸಿ ಒಂದು ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಸ್ಟಾಲಿನ್ ಟ್ವಿಟ್ಟರ್ ಮೂಲಕ ಹೀಗೆ ಪ್ರತಿಕ್ರಿಯಿಸಿದ್ದಾರೆ. 

ಹಿಂದೂಗಳು ಸೇಫ್ ಆಗಿದ್ದರೆ ಮುಸ್ಲಿಮರೂ ಸೇಫ್‌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

ಏಕೆ ಹಿಂದಿಯನ್ನು ದ್ವೇಷಿಸಬೇಕು ಎಂದು ಪ್ರಶ್ನಿಸಿದ ಆದಿತ್ಯನಾಥ್, ತಮಿಳುನಾಡಿನಲ್ಲಿ ಹಿಂದಿ ಭಾಷೆಗೆ ಇರುವ ವಿರೋಧದ ಬಗ್ಗೆ ಕೇಳಿದಾಗ, ದೇಶವನ್ನು ಭಾಷೆ ಅಥವಾ ಪ್ರದೇಶದ ಆಧಾರದ ಮೇಲೆ ವಿಭಜಿಸಬಾರದು. ವಾರಣಾಸಿಯಲ್ಲಿ ಮೂರನೇ ತಲೆಮಾರಿನ ಕಾಶಿ ತಮಿಳು ಸಂಗಮವನ್ನು ಆಯೋಜಿಸಿದ್ದಕ್ಕಾಗಿ ನಾವು ಪ್ರಧಾನಿ ಮೋದಿ ಜಿ ಅವರಿಗೆ ಕೃತಜ್ಞರಾಗಿರುತ್ತೇವೆ ಎಂದು ಉತ್ತರಿಸಿದ್ದಾರೆ. ತಮಿಳು ಭಾರತದ ಅತ್ಯಂತ ಹಳೆಯ ಭಾಷೆಗಳಲ್ಲಿ ಒಂದಾಗಿದೆ ಮತ್ತು ಅದರ ಇತಿಹಾಸವು ಸಂಸ್ಕೃತದಷ್ಟೇ ಪ್ರಾಚೀನವಾಗಿದೆ. ಭಾರತೀಯ ಪರಂಪರೆಯ ಹಲವು ಅಂಶಗಳು ಇನ್ನೂ ಭಾಷೆಯಲ್ಲಿ ಜೀವಂತವಾಗಿರುವುದರಿಂದ ಪ್ರತಿಯೊಬ್ಬ ಭಾರತೀಯನಿಗೂ ತಮಿಳಿನ ಬಗ್ಗೆ ಗೌರವ ಮತ್ತು ಪೂಜ್ಯ ಭಾವನೆ ಇದೆ. ಹಾಗಾದರೆ, ನಾವು ಹಿಂದಿಯನ್ನು ಏಕೆ ದ್ವೇಷಿಸಬೇಕು?ಎಂದು ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ. 

ಜನಸಂಖ್ಯೆಗೆ ತಕ್ಕಂತೆ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆಯ ಬಗ್ಗೆ ಸ್ಟಾಲಿನ್ ಅವರ ಕಳವಳಗಳನ್ನು ಆದಿತ್ಯನಾಥ್ ತಳ್ಳಿ ಹಾಕಿದ್ದರು, ಇದೊಂದು ರಾಜಕೀಯ ಕಾರ್ಯಸೂಚಿ, ನೋಡಿ, ಗೃಹ ಸಚಿವರು ಈ ವಿಷಯದ ಬಗ್ಗೆ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಸಭೆಯ ನೆಪದಲ್ಲಿ ಸ್ಟಾಲಿನ್ ಅವರ ರಾಜಕೀಯ ಕಾರ್ಯಸೂಚಿಯಾಗಿದೆ. ಗೃಹ ಸಚಿವರ ಹೇಳಿಕೆಯ ನಂತರ, ಈ ವಿಷಯದ ಬಗ್ಗೆ ಯಾವುದೇ ಪ್ರಶ್ನೆಗಳು ಉದ್ಭವಿಸಬಾರದು ಎಂದು ನಾನು ನಂಬುತ್ತೇನೆ ಎಂದು ಅವರು ಹೇಳಿದರು.

ಮಾರ್ಚ್ 22 ರಂದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಮೊದಲ ಜಂಟಿ ಕ್ರಿಯಾ ಸಮಿತಿ (ಜೆಎಸಿ), ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ದಂಡನೆ ವಿಧಿಸಬೇಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು. ಕೇಂದ್ರ ಸರ್ಕಾರದಿಂದ ಪಾರದರ್ಶಕತೆ ಮತ್ತು ಸ್ಪಷ್ಟತೆಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಕ್ಷೇತ್ರ ಪುನರ್ವಿಂಗಡಣೆಯ ವಿಷಯದ ಕುರಿತು ನಿರ್ಣಯವನ್ನು ಅಂಗೀಕರಿಸಿತು.

ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರನಿಂದ ಸನಾತನ ಧರ್ಮದ ಟೀಕೆ, ಕೊಲ್ಲೂರಿಗೆ ಪತ್ನಿ ಭೇಟಿ!

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದೂ ಆರೋಪಿಸಿದ್ದಾರೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರಲ್ಲಿ ವಿವರಿಸಿರುವ ತ್ರಿಭಾಷಾ ಸೂತ್ರದ ಅನುಷ್ಠಾನವನ್ನು ತಿರಸ್ಕರಿಸಿದ್ದಾರೆ . ಈ ನಿರಾಕರಣೆಯು ದೇಶದಲ್ಲಿ ಭಾಷಾ ನೀತಿಗಳ ಸುತ್ತ ನಡೆಯುತ್ತಿರುವ ಚರ್ಚೆಯನ್ನು ಮತ್ತೆ ಕೆರಳಿಸಿದೆ.

Scroll to load tweet…