ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀರಾಮ್' ಎಂದು ಪಠಿಸಲು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. 

ಚೆನ್ನೈ (ಏ.13): ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀರಾಮ್' ಎಂದು ಪಠಿಸಲು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. 

Add Asianetnews Kannada as a Preferred SourcegooglePreferred

ಶನಿವಾರ ಮಧುರೈನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿದ್ದ ರವಿ, ತಮ್ಮ ಭಾಷಣದ ಕೊನೆಯಲ್ಲಿ ತಮ್ಮ ನಂತರ ಘೋಷಣೆ ಕೂಗಲು ವಿದ್ಯಾರ್ಥಿಗಳನ್ನು ಕೇಳಿಕೊಂಡರು. ರಾಜ್ಯಪಾಲರ ಇಂಥ ಹೇಳಿಕೆಗಳು ತೀವ್ರ ಖಂಡನೀಯ ಎಂದು ಹೇಳಿದ ಕಾಂಗ್ರೆಸ್ ಶಾಸಕ ಜೆಎಂಎಚ್ ಹಸನ್ ಮೌಲಾನಾ, ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಅಂತಹ ಹೇಳಿಕೆಗಳು ಆರ್ ಎನ್ ರವಿ ಅವರ ಸಾಂವಿಧಾನಿಕ ಸ್ಥಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದರು.

ಇದನ್ನೂ ಓದಿ: ಗೌರ್ನರ್‌ ಸಹಿ ಇಲ್ಲದಿದ್ರೂ ತಮಿಳುನಾಡಿನಲ್ಲಿ 10 ಬಿಲ್ ಜಾರಿ: ದೇಶದಲ್ಲಿ ಇದೇ ಮೊದಲು!

ರಾಜ್ಯಪಾಲರು ದೇಶದ ಅತ್ಯುನ್ನತ ಹುದ್ದೆಗಳಲ್ಲಿ ಒಂದನ್ನು ಹೊಂದಿದ್ದಾರೆ ಆದರೆ ಅವರು ಧಾರ್ಮಿಕ ನಾಯಕರಂತೆ ಮಾತನಾಡುತ್ತಿದ್ದಾರೆ. ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಪ್ರಚಾರದ ಮಾಸ್ಟರ್ ಆಗಿದ್ದಾರೆ. ನೋಡಿ, ರಾಜ್ಯಪಾಲರು ಈ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ವೇಲಾಚೇರಿ ಶಾಸಕರು ಎಎನ್‌ಐಗೆ ತಿಳಿಸಿದರು. 

ಇದನ್ನೂ ಓದಿ: ಮುರ್ಷಿದಾಬಾದ್‌: ಭುಗಿಲೆದ್ದ ಹಿಂಸಾಚಾರ, ಬಿಎಸ್‌ಎಫ್ ಮೇಲೆಯೇ ಗುಂಡಿನ ದಾಳಿ!

ತಮಿಳುನಾಡು ರಾಜ್ಯಪಾಲರು ಈ ರೀತಿ ಮಾತಾಡುವುದು ಅತ್ಯಂತ ಖಂಡನೀಯ, ಅವರು ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ನ ಮುಖವಾಗಿ ವರ್ತಿಸುತ್ತಿದ್ದಾರೆ ಮತ್ತು ಅದರ ಸಿದ್ಧಾಂತವನ್ನು ಹರಡುತ್ತಿದ್ದಾರೆ. ಅವರು ಹೊಂದಿರುವ ಹುದ್ದೆ ಸಾಂವಿಧಾನಿಕ ಹುದ್ದೆಯಾಗಿದೆ, ಆದ್ದರಿಂದ ಅವರು ತಟಸ್ಥರಾಗಿರಬೇಕು ಎಂದು ಹಸನ್ ಹೇಳಿದರು. ಇದಲ್ಲದೆ, ರಾಜ್ಯಪಾಲ ರವಿ ಅವರಿಗೆ ಸುಪ್ರೀಂ ಕೋರ್ಟ್ ಈಗಾಗಲೇ ಛೀಮಾರಿ ಹಾಕಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದರು. ರಾಜ್ಯ ಶಾಸಕಾಂಗವು ಅಂಗೀಕರಿಸಿದ 10 ಮಸೂದೆಗಳ ಮೇಲೆ ಕ್ರಮ ಕೈಗೊಳ್ಳದೆ ಅಸಂವಿಧಾನಿಕ, ಕಾನೂನುಬಾಹಿರ ಮತ್ತು ತಪ್ಪಾದ ರೀತಿಯಲ್ಲಿ ವರ್ತಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅವರ ವಿರುದ್ಧ ಮಹತ್ವದ ತೀರ್ಪು ನೀಡಿದೆ.