ಎರಡು ದಿನಗಳ ಹಿಂದಷ್ಟೇ ತೆಲಂಗಾಣದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಸಾಯ್‌ ಸೌಂದರ್ ರಾಜನ್ ಬುಧವಾರ ಸೇರ್ಪಡೆಯಾಗಿದ್ದಾರೆ. 

ಚೆನ್ನೈ (ಮಾ.21): ಎರಡು ದಿನಗಳ ಹಿಂದಷ್ಟೇ ತೆಲಂಗಾಣದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಸಾಯ್‌ ಸೌಂದರ್ ರಾಜನ್ ಬುಧವಾರ ಸೇರ್ಪಡೆಯಾಗಿದ್ದಾರೆ. ಈ ನಡುವೆ ರಾಜ್ಯಪಾಲರಾಗಿದ್ದವರು ಮರಳಿ ರಾಜಕೀಯ ಪ್ರವೇಶ ಮಾಡಿದ್ದನ್ನು ಟೀಕಿಸಿದ ಡಿಎಂಕೆ ಮತ್ತು ಎಡಪಕ್ಷಗಳ ನಾಯಕರಿಗೆ ತಿರುಗೇಟು ನೀಡಿರುವ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, 

Add Asianetnews Kannada as a Preferred SourcegooglePreferred

ಸಾಂವಿಧಾನಿಕ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಮರಳಿ ಸಾಮಾನ್ಯ ವ್ಯಕ್ತಿಯಂತೆ ಚುನಾವಣೆಗೆ ನಿಲ್ಲುವ ಅವಕಾಶ ಇರುವುದು ಕೇವಲ ಬಿಜೆಪಿಯಲ್ಲಿ ಮಾತ್ರ ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ತಮಿಳ್‌ಸಾಯ್‌ ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಪುದುಚೇರಿ ಮೂಲದವರಾದ ತಮಿಳುಸಾಯಿ ಅವರು ಈ ಹಿಂದೆ ಬಿಜೆಪಿಯಲ್ಲಿಯೇ ಸಕ್ರಿಯರಾಗಿದ್ದರು. ಅವರನ್ನು ಬಿಜೆಪಿ ರಾಜ್ಯಪಾಲರನ್ನಾಗಿ ನೇಮಿಸಿತ್ತು. ಇನ್ನೂ ಒಂದು ವರ್ಷದ ಅವಧಿ ಇರುವಾಗಲೇ ಅವರು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪುದುಚೇರಿಯಲಿ ಎನ್‌. ರಂಗಸ್ವಾಮಿ ನೇತೃತ್ವದ ಎನ್‌ಆರ್‌ ಕಾಂಗ್ರೆಸ್‌ ಜತೆಗೆ ಬಿಜೆಪಿ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿದೆ. ಈ ಕಾರಣದಿಂದ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

Lok Sabha Election 2024: ಪಕ್ಷಗಳ ಉಚಿತ ಸ್ಕೀಂ: ಇಂದು ಸುಪ್ರೀಂಕೋರ್ಟ್ ವಿಚಾರಣೆ

ತಮಿಳುಸಾಯಿ ಅವರ ಹೆಸರು ಪರಿಗಣಿಸಿದೆ. ಒಂದೆರಡು ದಿನದಲ್ಲಿ ಅಧಿಕೃತವಾಗಿ ಅವರ ಹೆಸರು ಪ್ರಕಟವಾಗಬಹುದು ಎನ್ನಲಾಗುತ್ತಿದೆ. ಅಂದಹಾಗೆ ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​- ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.