ಹೆಸರು ಬದಲಾವಣೆ ಪರ್ವ/ ತೇಜಸ್ವಿ ಸೂರ್ಯ ಟ್ವೀಟ್ ಗೆ ವ್ಯಾಪಕ ಪ್ರತಿಕ್ರಿಯೆ/ #ItIsHyderabadNotBhagyanagar ಎಂಬ ಹ್ಯಾಷ್ ಟ್ಯಾಗ್ ಸಹ ಟ್ರೆಂಡ್/ ತೇಜಸ್ವಿ ಸೂರ್ಯ ಟ್ವೀಟ್ ಗೆ ಹಲವರ ವಿರೋಧ
ಬೆಂಗಳೂರು/ ಹೈದರಾಬಾದ್(ನ. 24) ಪಶ್ಚಿಮ ಬಂಗಾಳದ ನಂತರ ಹೈದರಾಬಾದ್ ಗೆ ಭೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರಾಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವಿಟರ್ ನಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
ಹೈದರಾಬಾದ್ ನ್ನು ಭಾಗ್ಯನಗರ ಎಂದು ಕರೆದಿರುವುದು ಟೀಕೆಗೆ ಮೂಲ ಕಾರಣ. ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಸಂಬಂಧ ಪ್ರವಾಸ ಮಾಡಿದ್ದ ಸೂರ್ಯ ವಿವಿಧ ಕಡೆ ಸಭೆ ನಡೆಸಿದ್ದರು. ಟ್ವೀಟ್ ಆರಂಭದಲ್ಲಿ ಭಾಗ್ಯನಗರ ಎಂದು ಕರೆದಿದ್ದಕ್ಕೆ ಟೀಕೆ ವ್ಯಕ್ತವಾಗಿದೆ.
ಹೈದರಾಬಾದ್ ಹೆಸರು ಬದಲಾಯಿಸುವ ಸೂರ್ಯ ಐಡಿಯಾ ಹಲವರ ತಿರಸ್ಕಾರಕ್ಕೆ ಗುರಿಯಾಗಿದೆ. ಗೋ ಬ್ಯಾಕ್ ಎಂಬ ಘೊಷಣೆಗಳು ಮೊಳಗಿವೆ.
#ItIsHyderabadNotBhagyanagar ಎಂಬ ಹ್ಯಾಷ್ ಟ್ಯಾಗ್ ಸಹ ಟ್ರೆಂಡ್ ಆಗಿದೆ. ಯೋಗಿ ಆದಿತ್ಯನಾಥ್ ಸಹ 2018 ರಲ್ಲಿ ಹೈದರಾವಾದ್ ನ್ನು ಭಾಗ್ಯನಗರ ಎಂದು ಬದಲಾಯಿಸಬೇಕು ಎಂದಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 24, 2020, 4:39 PM IST