ತಿಂಗಳಿಗೆ ಹೆಚ್ಚೆಂದರೆ 1.25 ಲಕ್ಷ ರು. ಪಡೆಯುವ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರ ಬಳಿ 100 ಕೋಟಿ ರು.ಗೂ ಅಧಿಕ ಮೌಲ್ಯದ ಆಸ್ತಿಯಿರುವುದನ್ನು ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಬುಧವಾರ ಅವರ ಮನೆ, ಕಚೇರಿ ಸೇರಿ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಹೈದ್ರಾಬಾದ್‌: ತಿಂಗಳಿಗೆ ಹೆಚ್ಚೆಂದರೆ 1.25 ಲಕ್ಷ ರು. ಪಡೆಯುವ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರ ಬಳಿ 100 ಕೋಟಿ ರು.ಗೂ ಅಧಿಕ ಮೌಲ್ಯದ ಆಸ್ತಿಯಿರುವುದನ್ನು ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆ, ಕಚೇರಿ ಸೇರಿದಂತೆ ಹಲವು ಸ್ಥಳಗಳ ಮೇಲೆ ದಾಳಿ

ಈ ಸಂಬಂಧ ಬುಧವಾರ ಅವರ ಮನೆ, ಕಚೇರಿ ಸೇರಿದಂತೆ ಹಲವು ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

11 ಸ್ಥಳಗಳ ಮೇಲೆ ನಡೆಸಿದ ದಾಳಿ

ಮೆಹಬೂಬ್‌ನಗರ ಜಿಲ್ಲೆಯ ಉಪ ಸಾರಿಗೆ ಆಯುಕ್ತ ಮುದ್‌ ಕೃಷ್ಣಗೆ ಸೇರಿದ 11 ಸ್ಥಳಗಳ ಮೇಲೆ ನಡೆಸಿದ ದಾಳಿ ವೇಳೆ, ಸಂಗಾರೆಡ್ಡಿ ಜಿಲ್ಲೆಯಲ್ಲಿ 31 ಎಕರೆ ಕೃಷಿಭೂಮಿ, ನಿಜಾಮಾಬಾದ್ ಪುರಸಭೆಯ ವ್ಯಾಪ್ತಿಯಲ್ಲಿ 10 ಎಕರೆ ವಾಣಿಜ್ಯ ಭೂಮಿ, ಲಹರಿ ಅಂತಾರಾಷ್ಟ್ರೀಯ ಹೋಟೆಲ್‌ನ ಶೇ.50ರಷ್ಟು ಷೇರು, ನಿಜಾಮಾಬಾದ್‌ನಲ್ಲಿ 3,000 ಚದರಡಿ ಪ್ರೀಮಿಯಂ ಪೀಠೋಪಕರಣಗಳ ಶೋ ರೂಂ, 1.37 ಕೋಟಿ ರು. ಬ್ಯಾಂಕ್‌ ಬ್ಯಾಲೆನ್ಸ್‌, 1 ಕೆ.ಜಿ. ಚಿನ್ನಾಭರಣ, ಇನ್ನೋವಾ ಕ್ರಿಸ್ಟಾ ಮತ್ತು ಹೋಂಡಾ ಸಿಟಿ ಸೇರಿದಂತೆ ಹಲವು ಐಷಾರಾಮಿ ವಾಹನ, 1 ಮನೆ, 1 ನರ್ಸರಿ ಇರುವುದು ಪತ್ತೆಯಾಗಿದೆ.