ನೀಲಗಿರಿ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ಗಿರಿಧಾಮ ತಮಿಳುನಾಡಿನ ಉದಕಮಂಡಲದಲ್ಲಿ(ಊಟಿ) ತಾಪಮಾನ ತೀವ್ರವಾಗಿ ಕುಸಿದಿದ್ದು ಗುರುವಾರ 1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಷ ದಾಖಲಾಗಿದೆ. ಮತ್ತೊಂದೆಡೆ ಉತ್ತರ ಭಾರತದ ಹಲವೆಡೆ ಮೈ ಕೊರೆವ ಚಳಿ ಆವರಿಸಿದೆ. 

ಊಟಿ: ನೀಲಗಿರಿ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ಗಿರಿಧಾಮ ತಮಿಳುನಾಡಿನ ಉದಕಮಂಡಲದಲ್ಲಿ(ಊಟಿ) ತಾಪಮಾನ ತೀವ್ರವಾಗಿ ಕುಸಿದಿದ್ದು ಗುರುವಾರ 1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಷ ದಾಖಲಾಗಿದೆ. ಮತ್ತೊಂದೆಡೆ ಉತ್ತರ ಭಾರತದ ಹಲವೆಡೆ ಮೈ ಕೊರೆವ ಚಳಿ ಆವರಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮ್ಮು ಕಾಶ್ಮೀರದಲ್ಲಿ ಹಲವು ಕಡೆ ತಾಪಮಾನ ಶೂನ್ಯಕ್ಕಿಂತ ಕೆಳಮಟ್ಟಕ್ಕೆ ಕುಸಿದಿದ್ದು, ಪಹಲ್ಗಾಂನಲ್ಲಿ -5.8 ಡಿ.ಸೆ., ಶ್ರೀನಗರ, ಗುಲ್ಮಾರ್ಗ್‌, ಕುಪ್ವಾರಾ ಮುಂತಾದೆಡೆ -4.5 ಡಿಗ್ರಿ ತಾಪಮಾನ ದಾಖಲಾಗಿದೆ. ಹಿಮಾಚಲದಲ್ಲಿ 5 ಸೆಂ.ಮೀಗೂ ದಪ್ಪನಾದ ಮಂಜು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಹಾಗೆಯೇ ಹರ್ಯಾಣ, ಪಂಜಾಬ್‌, ರಾಜಸ್ಥಾನ, ದೆಹಲಿ ಮತ್ತು ಜಾರ್ಖಂಡ್‌ನ ಹಲವು ನಗರಗಳಲ್ಲೂ ದಟ್ಟ ಮಂಜು ಆವರಿಸಿದೆ.

ಈ ನಡುವೆ ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ಜೈಪುರಕ್ಕೆ ಎರಡು, ಮುಂಬೈ ಹಾಗೂ ಹೈದರಾಬಾದ್‌ಗೆ ತಲಾ 1 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲೂ ಸಹ ದಟ್ಟ ಮಂಜು ಆವರಿಸಿದ ಪರಿಣಾಮ 14 ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

ವಾಹನ ಸವಾರರೇ ಎಚ್ಚರ: ಚಳಿಗಾಲದಲ್ಲೇ ರಸ್ತೆ ಅಪಘಾತ ಹೆಚ್ಚು..!

ಊಟಿಯಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ಶೂನ್ಯದತ್ತ ತಾಪಮಾನ ಇಳಿದಿದೆ. ಉತ್ತರ ಭಾರತದಲ್ಲೂ ದಟ್ಟ ಮಂಜು ಆವರಿಸಿದೆ. ಈ ನಡುವೆ ದೆಹಲಿಯಲ್ಲಿ ಹಲವು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಜಾರ್ಖಂಡ್‌ನಲ್ಲಿ ಹಲವು ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ.

ಉತ್ತರದಲ್ಲಿ ತೀವ್ರ ಚಳಿ: ಕೆಲವೆಡೆ ಶೂನ್ಯ ತಾಪಮಾನ, ಜಮ್ಮುನಲ್ಲಿ 2.2 ಡಿಗ್ರಿ