Asianet Suvarna News Asianet Suvarna News

ಕೊಲೆ ಆರೋಪಿಗೆ ಗುಂಡಿಕ್ಕಿ ಹತ್ಯೆ: ಪೊಲೀಸರ ಮುಂದೆಯೇ ಕೋರ್ಟ್ ಆವರಣದಲ್ಲೇ ಘಟನೆ

ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ವಿಚಾರಣಾಧೀನ ಕೈದಿಯಾಗಿದ್ದ ಆರೋಪಿಯೋರ್ವನನ್ನು ನ್ಯಾಯಾಲಯದ ಆವರಣದಲ್ಲೇ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.  ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ. 

The murder accused was shot dead in the court premises in front of the police at bihars Danpur akb
Author
First Published Dec 15, 2023, 5:11 PM IST

ಪಾಟ್ನಾ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ವಿಚಾರಣಾಧೀನ ಕೈದಿಯಾಗಿದ್ದ ಆರೋಪಿಯೋರ್ವನನ್ನು ನ್ಯಾಯಾಲಯದ ಆವರಣದಲ್ಲೇ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.  ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ. 

ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಹತ್ಯೆಗೀಡಾದ ವಿಚಾರಣಾಧೀನ ಕೈದಿ. ಬಿಹಾರದ ಸಿಕಂದೆರ್‌ಪುರದ ನಿವಾಸಿಯಾದ ಈತ ತನ್ನ ವಿರುದ್ಧ ಕೊಲೆ ಪ್ರಕರದ ಜೊತೆ ಇನ್ನು ಹಲವು ಪ್ರಕರಗಳನ್ನು ಎದುರಿಸುತ್ತಿದ್ದ. ಈ ಪ್ರಕರಣಗಳ ಹಿನ್ನೆಲೆಯಲ್ಲಿ ಈತ ಬಂಧಿತನಾಗಿದ್ದು, ಬೇಯೋರ್ ಜೈಲಿನಲ್ಲಿದ್ದ. ಇಂದು ಕೋರ್ಟ್‌ನಲ್ಲಿ ಈ ಪ್ರಕರಣಗಳ ವಿಚಾರಣೆ ಇದ್ದು, ಆತನನ್ನು ಧನ್‌ಪುರ್‌ನ ನ್ಯಾಯಾಲಯಕ್ಕೆ ಕರೆತರುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

ಕಲಬುರಗಿ ವಕೀಲನ ಬರ್ಬರ ಹತ್ಯೆ ಪ್ರಕರಣ; 8 ವರ್ಷಗಳ ಹಿಂದೆ ನಡೆದಿದ್ದ ಹಲ್ಲೆ ವಿಡಿಯೋ ಮತ್ತೆ ವೈರಲ್!

ಧನ್‌ಪುರ್‌ ಕೋರ್ಟ್‌ಗೆ ಆತನನ್ನು ಕರೆತರುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.  ಆತ ಅಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ಪಶ್ಚಿಮ ಪಾಟ್ನಾ ಎಎಸ್ಪಿ ರಾಜೇಶ್‌ಕುಮಾರ್ ಹೇಳಿದ್ದಾರೆ. ಘಟನೆ ನಡೆದ ಸ್ಥಳದಿಂದ 4 ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಿಂದಾಗಿ ಕೋರ್ಟ್ ಆವರಣದಲ್ಲಿ  ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಘಟನೆಯ ನಂತರ ಕೂಡಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ. ಅವರು ಮುಜಾಫರ್‌ಪುರ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೋರ್ಟ್ ಆವರಣದಲ್ಲೇ ಪರಸ್ಪರ ಗುಂಡು ಹಾರಿಸಿದ ವಕೀಲರು: ದೃಶ್ಯ ಸಿಸಿಟಿವಿಯಲ್ಲಿ ಸೆರೆ

Follow Us:
Download App:
  • android
  • ios