Asianet Suvarna News Asianet Suvarna News

ಮಹಾರಾಷ್ಟ್ರ ಸರ್ಕಾರಿ ಬಸ್‌ ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ!

ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ನಡೆದಿದೆ.

thieves Steal a Maharashtra bus and kept it in Karnataka state boundary akb
Author
First Published Feb 3, 2023, 10:29 AM IST

ಲಾತೂರ್‌: ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಲಾತೂರು ಬಳಿಕ ಔರಾದ ಶಹಾಜಾನಿ ನಿಲ್ದಾಣದಿಂದ ನಿಲ್ಲಿಸಲಾಗಿದ್ದ ಬಸ್ಸು ಬೆಳಗ್ಗೆ 3 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ನಾಪತ್ತೆ ಆಗಿತ್ತು. ಬಳಿಕ ಈ ಬಸ್ಸು 14 ಕಿ.ಮೀ. ದೂರದ ಕರ್ನಾಟಕದ ಕೇಸರ್‌ ಜವಳಗಾ ಗ್ರಾಮದ ಬಳಿ ಪತ್ತೆ ಆಗಿದೆ. ಯಾರೋ ಅಪರಿಚಿತ ವ್ಯಕ್ತಿ ಇದನ್ನು ಚಲಾಯಿಸಿಕೊಂಡು ಬಂದು, ಜವಳಗಾ ಗ್ರಾಮದಲ್ಲಿ ನಿಲ್ಲಿಸಿ ಹೋಗಿದ್ದಾನೆ. ಯಾರು ಇದನ್ನು ಮಾಡಿದ್ದು ಏಕೆ ಮಾಡಿದ್ದುಎಂಬ ಬಗ್ಗೆ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. 

ಮಹಾರಾಷ್ಟ್ರದ ಕೃಷಿ ಮೇಳದಲ್ಲಿ ಮಿರಿಮಿರಿ ಮಿಂಚಿದ ಕರ್ನಾಟಕದ ಕೋಣ...!

ಮಹಾರಾಷ್ಟ್ರದಲ್ಲಿ ಉಲ್ಟಾ ಆಟೋ ರೇಸ್: ಅಬ್ಬಾ ನಿಜಕ್ಕೂ ಇದು ಹೇಗೆ ಸಾಧ್ಯ?

Follow Us:
Download App:
  • android
  • ios