ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಖಲಿಸ್ತಾನಿ ಮತ್ತು ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಗಳ ದಾಳಿ ಬೆದರಿಕೆ ಇದ್ದು, ದೆಹಲಿ ಸೇರಿ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಖಲಿಸ್ತಾನಿ ಮತ್ತು ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಗಳ ದಾಳಿ ಬೆದರಿಕೆ ಇದ್ದು, ದೆಹಲಿ ಸೇರಿ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Add Asianetnews Kannada as a Preferred SourcegooglePreferred

ಮೂಲಭೂತವಾದಿಗಳ ಕಾಲಾಳುಗಳ ರೀತಿಯಲ್ಲಿ ಕೆಲಸ

ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ಗಳು, ಖಲಿಸ್ತಾನಿ ಉಗ್ರರು ಮತ್ತು ವಿದೇಶದಲ್ಲಿ ಕುಳಿತ ಮೂಲಭೂತವಾದಿಗಳ ಕಾಲಾಳುಗಳ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಗ್ಯಾಂಗ್‌ಸ್ಟರ್‌ಗಳು ಹರ್ಯಾಣ, ದೆಹಲಿ-ಎನ್‌ಸಿಆರ್‌, ಉತ್ತರಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚು ಚಟುವಟಿಕೆಯಿಂದಿದ್ದಾರೆ. ಈಗಾಗಲೇ ಅವರು ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕವನ್ನೂ ಸಾಧಿಸಿದ್ದಾರೆ.

ಗ್ಯಾಂಗ್‌ಸ್ಟರ್‌ಗಳನ್ನು ಬಳಸಿಕೊಂಡು ಅಹಿತಕರ ಘಟನೆ

ಈ ಗ್ಯಾಂಗ್‌ಸ್ಟರ್‌ಗಳನ್ನು ಬಳಸಿಕೊಂಡು ದೆಹಲಿ ಸೇರಿ ದೇಶದ ಇತರೆ ನಗರಗಳಲ್ಲಿ ಅಹಿತಕರ ಘಟನೆ ನಡೆಸುವ ಆತಂಕವಿದೆ. ಹೀಗಾಗಿ ಹೆಚ್ಚು ಎಚ್ಚರಿಕೆಯಿಂದಿರುವಂತೆ ಗುಪ್ತಚರ ಮೂಲಗಳು ತಿಳಿಸಿವೆ.