ಒಟ್ಟೊಟ್ಟಿಗೆ ಬಂದ ಸೆಕೆಂಡ್ ಸಟರ್ಡೇ(2ನೇ ಶನಿವಾರ), ಭಾನುವಾರ ಹಾಗೂ ಸೋಮವಾರ ಬಕ್ರೀದ್ ಹಬ್ಬದ ರಜೆಯಿಂದಾಗಿ ಹಿಂದೂ ತೀರ್ಥಕ್ಷೇತ್ರ ತಿರುಪತಿಯಲ್ಲಿ ಭಕ್ತರು ಕಿಕ್ಕಿರಿದು ತುಂಬಿದ್ದು, ದೇವರ ದರ್ಶನಕ್ಕಾಗಿ 3 ಕಿಲೋ ಮೀಟರ್ ಸರತಿಯಲ್ಲಿ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. 

ತಿರುಮಲ: ಒಟ್ಟೊಟ್ಟಿಗೆ ಬಂದ ಸೆಕೆಂಡ್ ಸಟರ್ಡೇ, ಭಾನುವಾರ ಹಾಗೂ ಸೋಮವಾರ ಬಕ್ರೀದ್ ಹಬ್ಬದ ರಜೆಯಿಂದಾಗಿ ಹಿಂದೂ ತೀರ್ಥಕ್ಷೇತ್ರ ತಿರುಪತಿಯಲ್ಲಿ ಭಕ್ತರು ಕಿಕ್ಕಿರಿದು ತುಂಬಿದ್ದು, ದೇವರ ದರ್ಶನಕ್ಕಾಗಿ 3 ಕಿಲೋ ಮೀಟರ್ ಸರತಿಯಲ್ಲಿ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ, ಭಾನುವಾರದ ರಜೆ ಹಾಗೂ ಸೋಮವಾರ ಬಕ್ರೀದ್‌ ರಜೆ ಕಾರಣ ತಿರುಮಲದ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಶನಿವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು.

ತಿರುಪತಿಯಲ್ಲಿ ತಲೆ ಬೋಳಿಸಿಕೊಂಡ ದಕ್ಷಿಣದ ಪ್ರಖ್ಯಾತ ನಟಿ!

ದೇಶದಲ್ಲಿ ಚುನಾವಣೆ ಮುಕ್ತಾಯಗೊಂಡಿದ್ದು, ಅನೇಕ ಪರೀಕ್ಷೆಗಳ ಫಲಿತಾಂಶವೂ ಹೊರಬಿದ್ದಿದೆ. ಇದರ ಜೊತೆಗೆ ವಾರಾಂತ್ಯ ಹಾಗೂ ಬಕ್ರೀದ್‌ ಹಬ್ಬ ಜೊತೆ ಜೊತೆಗೆ ಬಂದಿರುವುದರಿಂದ ಮಕ್ಕಳಿಗೂ ಶಾಲೆಗೆ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಈ ದಟ್ಟಣೆ ಸೋಮವಾರದವರೆಗೂ ಅಂದರೆ ಇಂದು ಸಂಜೆಯವರೆಗೂ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಟ್ರಸ್ಟ್‌ ತಿಳಿಸಿದೆ.

ಈ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ದೇಗುಲ ಟ್ರಸ್ಟ್‌ ಹೇಳಿದೆ.

ಭ್ರಷ್ಟಾಚಾರ ಕೊನೆಗೊಳಿಸುವೆ, ಹಿಂದೂ ಧರ್ಮ ರಕ್ಷಿಸುವೆ: ತಿರುಪತಿಗೆ ಭೇಟಿ ಬಳಿಕ ಆಂಧ್ರ ಸಿಎಂ ನಾಯ್ಡು ವಾಗ್ದಾನ

Scroll to load tweet…