ನೆಡುಂಬಾಶ್ಶೇರಿಯಲ್ಲಿ ವಿಮಾನ ನಿಲ್ದಾಣದ ತ್ಯಾಜ್ಯದ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಮಗು ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕೊಚ್ಚಿ (ಫೆ.7): ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ತೆರೆದಿಟ್ಟಿದ್ದ ತ್ಯಾಜ್ಯದ ಗುಂಡಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದೆ. ರಾಜಸ್ಥಾನ ಮೂಲದ ರಿಧಾನ್ ಜಾಜು ಮೃತಪಟ್ಟ ಮಗು. ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಕುಟುಂಬ ಮಗುವಿನೊಂದಿಗೆ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಗೆ ಹೊಕಿತ್ತು. ಈ ವೇಳೆ ಕೆಫೆಯ ಹೊರಗಡೆ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಆಸ್ಪತ್ರೆಗೆ ಸಾಗಿಸಲಾದರೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ದೇಶೀಯ ಆಗಮನ ಟರ್ಮಿನಲ್ ಬಳಿ ಇಂದು ಮಧ್ಯಾಹ್ನ ಈ ದುರ್ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸಿಯಾಲ್ ಪ್ರಕಟಣೆಯಲ್ಲಿ ತಿಳಿಸಿದೆ. ದೇಶೀಯ ಟರ್ಮಿನಲ್‌ನ ಹೊರಗಿರುವ ಅನ್ನ ಸಾರಾ ಕೆಫೆಯ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ. ವಿಮಾನನಿಲ್ದಾಣದ ಕೆಫೆಗೆ ಮಗುವಿನ ಪೋಷಕರು ಬಂದಿದ್ದಾಗ ಈ ಘಟನೆ ನಡೆದಿದೆ. ಸ್ವಲ್ಪ ಸಮಯದ ನಂತರ ಮಗು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಸಿಯಾಲ್ ಭದ್ರತಾ ವಿಭಾಗದ ಸಹಾಯದಿಂದ ಸಿಸಿಟಿವಿ ಪರಿಶೀಲಿಸಿದಾಗ, ಮಗು ಬೇಲಿ ದಾಟಿ ಗುಂಡಿಗೆ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ರಾಜ್ಯವಾಳುವವರಿಗೆ ಕೆಡುಕಾಗಲಿದ್ಯಾ, 4 ದಶಕದಿಂದ ಉರಿಯುತ್ತಿದ್ದ ಚಿಗಳ್ಳಿ ದೀಪ ನಂದಿಹೋಯ್ತು!

'ಇಂದು ನೆಡುಂಬಸ್ಸೆರಿ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಕಸದ ಗುಂಡಿಗೆ ಬಿದ್ದು ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತನನ್ನು ರಿಧಾನ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಯ ಹಿಂದೆ ಈ ಘಟನೆ ನಡೆದಿದೆ. ತನ್ನ ಅಣ್ಣನೊಂದಿಗೆ ಹೊರಗೆ ಆಟವಾಡುತ್ತಿದ್ದ ಮಗು ಕಸ ತುಂಬಿದ ಗುಂಡಿಗೆ ಬಿದ್ದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

Haveri: ದೇವಸ್ಥಾನದ ಮೇಲೆ ಕಳಸ ಕೂರಿಸುವಾಗ ಕ್ರೇನ್‌ ಬಕೆಟ್‌ ಕಟ್‌ ಆಗಿ ವ್ಯಕ್ತಿಯ ಸಾವು!

Scroll to load tweet…