ತಿರುಪತಿಗೆ ಹೋಗೋ ಭಕ್ತರಿಗೊಂದು ಗುಡ್ ನ್ಯೂಸ್!
* ದೇವರ ದರ್ಶನದ ಅವಧಿಯನ್ನು ರಾತ್ರಿ 11.30ರವರೆಗೆ ಹೆಚ್ಚಳ
* ಈವರೆಗೆ 10 ಗಂಟೆಗೆ ದರ್ಶನದ ಅವಧಿ ಮುಕ್ತಾಯವಾಗುತ್ತಿತ್ತು
* ನಂತರ ಏಕಾಂತ ಸೇವೆ ನಡೆಯಲಿದ್ದು, ರಾತ್ರಿ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುತ್ತದೆ
ತಿರುಪತಿ(ಸೆ.21): ತಿರುಮಲ ತಿರುಪತಿ ದೇವಸ್ಥಾನಮ್ ಸಮಿತಿ (ಟಿಟಿಡಿ) ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನದ ಅವಧಿಯನ್ನು ರಾತ್ರಿ 11.30ರವರೆಗೆ ಹೆಚ್ಚಿಸಿದೆ.
ಈವರೆಗೆ 10 ಗಂಟೆಗೆ ದರ್ಶನದ ಅವಧಿ ಮುಕ್ತಾಯವಾಗುತ್ತಿತ್ತು. ಇನ್ನು 11.30ರವರೆಗೆ ದರ್ಶನ ಭಾಗ್ಯ ಭಕ್ತಾದಿಗಳಿಗೆ ಲಭಿಸಲಿದೆ. ನಂತರ ಏಕಾಂತ ಸೇವೆ ನಡೆಯಲಿದ್ದು, ರಾತ್ರಿ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುತ್ತದೆ ಎಂದು ತಿಳಿಸಲಾಗಿದೆ.
ತಿರುಪತಿ ತಿರುಮಲ ಟ್ರಸ್ಟ್ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ
ಭಕ್ತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಟಿಟಿಡಿ ದರ್ಶನದ ಅವಧಿಯನ್ನು ಹೆಚ್ಚಿಸಿದೆ. ತಿರುಪತಿ ದೇವಸ್ಥಾನದಲ್ಲಿ ನೀಡುವ ಉಚಿತ ದರ್ಶನದ ಟೋಕನ್ಗಳ ಪ್ರಮಾಣವನ್ನು ಹೆಚ್ಚಿಸುವುದಾಗಿ ಟಿಟಿಡಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ.
ತಿಮ್ಮಪ್ಪನಿಗೆ ಕೊಟ್ಟ ಹೂ ಬಳಸಿ ತಯಾರಿಸಿದ ಅಗರಬತ್ತಿ ಬಿಡುಗಡೆ!
ಈಗ ಪ್ರತಿದಿನ ಸರಾಸರಿ 25 ಸಾವಿರ ಭಕ್ತಾದಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಶನಿವಾರ 29 ಸಾವಿರ ಭಕ್ತರು ಭೇಟಿ ಕೊಟ್ಟಿದ್ದರು. ಹುಂಡಿಯಿಂದ 2.30 ಕೋಟಿ ರು. ಆದಾಯ ಸಂಗ್ರಹವಾಗಿದೆ.