Asianet Suvarna News Asianet Suvarna News

Tirupati Rain : ಮಳೆಯಿಂದ ತಪ್ಪಿದ್ದ ತಿಮ್ಮಪ್ಪನ ದರ್ಶನಕ್ಕೆ ಶೀಘ್ರ ಹೊಸ ದಿನಾಂಕ

  •  ಭಾರೀ ಮಳೆಯಿಂದಾಗಿ ಕಳೆ ಕೆಲ ದಿನಗಳಿಂದ ತಿರುಪತಿ ತಿಮ್ಮಪ್ಪನ ದರ್ಶನದಿಂದ ವಂಚಿತರಾದ ಭಕ್ತರು
  •  ಶೀಘ್ರವೇ ಮತ್ತೆ ಅವಕಾಶ ಮಾಡಿಕೊಡಲಾಗುವುದು ಎಂದು ಟಿಟಿಡಿ ಹೇಳಿಕೆ
Tirupati  to facilitate rescheduling of darshan for devotees snr
Author
Bengaluru, First Published Nov 24, 2021, 8:09 AM IST

ತಿರುಪತಿ (ನ.24) : ಭಾರೀ ಮಳೆಯಿಂದಾಗಿ (Heavy Rain) ಕಳೆ ಕೆಲ ದಿನಗಳಿಂದ ತಿರುಪತಿ ತಿಮ್ಮಪ್ಪನ (Tirupathi Thimmappa) ದರ್ಶನದಿಂದ ವಂಚಿತರಾದವರಿಗೆ ಶೀಘ್ರವೇ ಮತ್ತೆ ಅವಕಾಶ ಮಾಡಿಕೊಡಲಾಗುವುದು ಎಂದು ಟಿಟಿಡಿ (TTD) ಹೇಳಿದೆ. ನ.18ರಿಂದ 30ರ ಅವಧಿಯಲ್ಲಿ ದರ್ಶನಕ್ಕೆ ಟಿಕೆಟ್‌ ಬುಕ್‌ (Ticket book) ಮಾಡಿದ್ದವರಿಗೆ ಡಿಸೆಂಬರ್‌ ನಂತರದ 6 ತಿಂಗಳಲ್ಲಿ ಬದಲಿ ದಿನಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ (Tirumala tirupathi) ಮಂಡಳಿ ಹೇಳಿದೆ. ಈ ಕುರಿತು ಸಭೆ ನಡೆಸಿದ ಟಿಟಿಡಿಯ ಮುಖ್ಯಸ್ಥರು ಈ ತೀರ್ಮಾನ ಕೈಗೊಂಡಿದ್ದಾರೆ. ದರ್ಶನ ತಪ್ಪಿಸಿಕೊಂಡ ಭಕ್ತರಿಗಾಗಿ ಅವರು ಬುಕ್‌ ಮಾಡಿದ ಹಳೇ ಟಿಕೆಟ್‌ ನಂಬರಿನಲ್ಲೇ ಹೊಸ ಟಿಕೆಟ್‌ ನೀಡುವ ಸಾಫ್ಟ್‌ ವೇರ್‌ ರೂಪಿಸಲಾಗುತ್ತಿದೆ ಎಂದು ಟಿಟಿಡಿಯ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಹೇಳಿದ್ದಾರೆ.

25 ವರ್ಷಗಳಲ್ಲೇ ಅತ್ಯಧಿಕ ಮಳೆ :    ಬಂಗಾಳ ಕೊಲ್ಲಿಯಲ್ಲಿ (Bangala Kolli) ಉಂಟಾಗಿರುವ ವಾಯುಭಾರ  ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ (Tirupathi) ಸಂಕಷ್ಟ ತಂದಿಟ್ಟಿದೆ. ವಾಯುಭಾರ ಕುಸಿತದ ಪರಿಣಾಮ ತಿರುಮಲ, ತಿರುಪತಿ ಸೇರಿದಂತೆ ಚಿತ್ತೂರು (Chittur) ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿತ್ತು, ಎಲ್ಲೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ  ದೇಗುಲ (Temple) ನಗರದಲ್ಲಿ ಇಂಥ ಮಳೆ (Rain) ಅನಾಹುತ ಘಟಿಸಿದ್ದು 1996 ಭೀಕರ ಪ್ರವಾಹದ (flood) ಬಳಿಕ ಇದೇ ಮೊದಲು ಎನ್ನಲಾಗುತ್ತಿದೆ.

ತಿರುಪತಿಯ ಹಲವು ತಗ್ಗು ಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ತಿರುಮಲ (Tirumala) ಬೆಟ್ಟಕ್ಕೆ ಹೊಂದಿಕೊಂಡಿರುವ ಎಲ್ಲಾ ನಾಲ್ಕು ಪವಿತ್ರ ಮಾಡಾ ಬೀದಿಗಳು ಮತ್ತು ವೈಕುಂಠ ಕ್ಯೂ ಕಾಂಪ್ಲೆಕ್ಸ್‌ ಕೂಡಾ ಪೂರ್ಣ ಜಲಾವೃತವಾಗಿತ್ತು. ತಿರುಮಲದ ಜಪಾಲಿ ಆಂಜನೇಯ ದೇಗುಲ (Japali anjaneya temple) ಕೂಡಾ ನೀರಿನಲ್ಲಿ ಮುಳುಗಿದೆ. ಭಾರೀ ಮಳೆಯ ಪರಿಣಾಮ ತಿಮ್ಮಪ್ಪನ ದರ್ಶನವನ್ನು   ಸ್ಥಗಿತಗೊಳಿಸಬೇಕಾಗಿ ಬಂದಿದ್ದು, ದೇವರ ದರ್ಶನಕ್ಕೆ ಆಗಮಿಸಿದ್ದ ಸಾಕಷ್ಟು ಜನ ಬೆಟ್ಟದ ಮೇಲೇ ಸಿಕ್ಕಿಬಿದ್ದಿದ್ದರು.

ತಿರುಪತಿ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್‌ ಆಗಿವೆ. ಜೊತೆಗೆ ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ (Road) ಮಾರ್ಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದ್ದು, ಮರಗಳು ಬುಡ ಮೇಲಾಗಿವೆ. ಟಿಟಿಡಿ (TTD) ವಸತಿಗೃಹಗಳು ಕೂಡಾ ನೀರಿನಲ್ಲಿ ಮುಳುಗಿಹೋಗಿವೆ.

ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ (Temple) ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ. ಜಾಲತಾಣದಲ್ಲಿ ಹಂಚಿಕೊಳ್ಳಲಾದ ಇನ್ನೊಂದು ವಿಡಿಯೋದಲ್ಲಿ ತಿರುಮಲ ಘಾಟಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಳೆಗೆ ಕೊಚ್ಚಿ ಹೋದ ದೃಶ್ಯವಿದೆ.

ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ.ಈ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ವೆಂಕಟೇಶ್ವರ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಬಂದ್‌ ಮಾಡಲಾಗಿದೆ (road) . ಮಂದ ಬೆಳಕಿನ ಪರಿಣಾಮ ಬೆಂಗಳೂರು (Bengaluru), ಹೈದರಾಬಾದ್‌ನಿಂದ ರೆನುಗುಂಟಾ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳನ್ನು ವಾಪಸ್‌ ಕಳಿಸಲಾಗಿದೆ. ದಿಲ್ಲಿಯಿಂದ ತಿರುಪತಿಗೆ ಬರಬೇಕಿದ್ದ ವಿಮಾನವನ್ನು ರದ್ದುಪಡಿಸಲಾಗಿದೆ.  

Follow Us:
Download App:
  • android
  • ios