ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷಕ್ಕೆ ಇಂಡಿಯಾ ಕೂಟದ ಪಕ್ಷಗಳಾದ ಟಿಎಂಸಿ ಮತ್ತು ಶಿವಸೇನೆ ಬೆಂಬಲ ಘೋಷಿಸಿವೆ. ಕಾಂಗ್ರೆಸ್ ₹25 ಲಕ್ಷ ಉಚಿತ ಆರೋಗ್ಯ ವಿಮೆ ಭರವಸೆ ನೀಡಿದೆ.

ನವದೆಹಲಿ: ಇಂಡಿಯಾ ಕೂಟದ ಭಾಗವಾದ ಆಪ್ ಹಾಗೂ ಕಾಂಗ್ರೆಸ್ ದೆಹಲಿ ಚುನಾವಣೆಯಲ್ಲಿ ಕೂಟದ ಇತರೆ ಪಕ್ಷಗಳು ಒಂದೊಂದಾಗಿ ಆಪ್ ಜತೆ ಕೈ ಜೋಡಿಸತೊಡಗಿವೆ. ಇದೀಗ ನಾಯಕಿ, ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಆಪ್‌ಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಅತ್ತ ಉದ್ಧವ್ ಠಾಕ್ರೆ ಅವರ ಶಿವಸೇನೆ ಕೇಜ್ರಿವಾಲ್ ಪರ ಪ್ರಚಾರ ಮಾಡಲು ನಿರ್ಧರಿಸಿದೆ. ವಿಧಾನಸಭೆ ಪ್ರತಿಸ್ಪರ್ಧಿಗಳಾಗಿದ್ದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಆಪ್ ಸಂಚಾಲಕ ಅರವಿಂದ್ ಕೇಜಿವಾಲ್, 'ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವನ್ನು ಬೆಂಬಲಿಸಿದ್ದಕ್ಕೆ ಮಮತಾ ದೀದಿಗೆ ಧನ್ಯವಾದ. ನೀವು ಎಂದೆಂದೂ ನಮಗೆ ಬೆಂಬಲವಾಗಿದ್ದು, ಒಳ್ಳೆಯ ಹಾಗೂ ಕೆಟ್ಟ ಸಮಯದಲ್ಲಿ ಆಶೀರ್ವದಿಸಿದ್ದೀರಿ' ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮುಂಚೆ ಸಮಾಜವಾದಿ ಪಕ್ಷ ಆಪ್‌ಗೆ ಬೆಂಬಲ ಸೂಚಿಸಿತ್ತು. ಇಂಡಿಯಾ ಕೂಟದ ನಾಯಕತ್ವವನ್ನು ಕಾಂಗ್ರೆಸ್ ತೊರೆಯಬೇಕು ಎಂಬ ಮಮತಾ ಕರೆಗೆ ಇತ್ತೀಚೆಗೆ ಆಪ್, ಎಸ್‌ಪಿ ಸೇರಿ ಹಲವು ಪಕ್ಷಗಳು ಬೆಂಬಲ ನೀಡಿದ್ದವು.

Add Asianetnews Kannada as a Preferred SourcegooglePreferred

ಪ್ಯಾರಿ ದೀದಿ ಸ್ಕೀಂ ಬಳಿಕ ₹ 25 ಲಕ್ಷ ಆರೋಗ್ಯ ವಿಮೆ: ದಿಲ್ಲಿ ಕಾಂಗ್ರೆಸ್‌ ಭರವಸೆ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಪಕ್ಷ ಗೆದ್ದರೆ ಕರ್ನಾಟಕದ ‘ಗೃಹಲಕ್ಷ್ಮೀ’ ಮಾದರಿಯಲ್ಲಿಯೇ ಪ್ಯಾರಿ ದೀದಿ ಸ್ಕೀಂ ಘೋಷಿಸಿದ್ದ ಕಾಂಗ್ರೆಸ್‌, ಇದೀಗ ₹ 25 ಲಕ್ಷ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿದೆ. ಪಕ್ಷದ ಹಿರಿಯ ನಾಯಕ, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಚುನಾವಣಾ ಪ್ರಚಾರದ ವೇಳೆ ಈ ಘೋಷಣೆ ಮಾಡಿದ್ದಾರೆ. ‘ದೆಹಲಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 25 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮೆ ನೀಡುವ ‘ಜೀವನ ರಕ್ಷಾ ಯೋಜನೆ’ ಜಾರಿಗೆ ತರಲಾಗುತ್ತದೆ’ ಎಂದಿದ್ದಾರೆ. 70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್ಲಿ ಫೆ. 5ಕ್ಕೆ ಚುನಾವಣೆ ನಡೆಯಲಿದ್ದು, ಫೆ.8ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: 

Scroll to load tweet…