ವೀರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸುಪ್ರೀಂ ಕೋರ್ಟ್ ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದ್ದು, ಪುನರಾವರ್ತನೆಯಾದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ವೀರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸುಪ್ರೀಂ ಕೋರ್ಟ್ ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದ್ದು, ಪುನರಾವರ್ತನೆಯಾದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

Add Asianetnews Kannada as a Preferred SourcegooglePreferred

2022ರ ನವೆಂಬರ್ 17ರಂದು ಮಹಾರಾಷ್ಟ್ರದ ಅಕೋಲಾದಲ್ಲಿ 'ಭಾರತ್ ಜೋಡೋ ಯಾತ್ರೆ' ವೇಳೆ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು 'ಬ್ರಿಟಿಷರ ಸೇವಕ' ಎಂದು ಕರೆದಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿತ್ತು. ಅಲಹಾಬಾದ್ ಹೈಕೋರ್ಟ್‌ನ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಅದಾನಿ ರಕ್ಷಿಸಲು ಮೊಸಾದ್ ರಹಸ್ಯ ಕಾರ್ಯಾಚರಣೆ: ರಾಹುಲ್ ಗಾಂಧಿ-ಹಿಂಡನ್‌ಬರ್ಗ್ ಲಿಂಕ್ ಬಯಲು!

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರ ಪೀಠವು, 'ನಿಮ್ಮ ಕಕ್ಷಿದಾರರಿಗೆ ಮಹಾತ್ಮ ಗಾಂಧಿ 'ನಿಷ್ಠಾವಂತ ಸೇವಕ' ಎಂಬ ಪದವನ್ನು ಬಳಸಿದ್ದಾರೆಂದು ತಿಳಿದಿದೆಯೇ? ಅವರ ಅಜ್ಜಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪತ್ರ ಬರೆದಿದ್ದಾರೆಂದು ಗೊತ್ತಿದೆಯೇ?' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ 'ರಾಜಕೀಯ ನಾಯಕರಾಗಿ ಇಂತಹ ಹೇಳಿಕೆಗಳನ್ನು ಏಕೆ ನೀಡಬೇಕು? ಪ್ರಚೋದನೆ ಉದ್ದೇಶವಿಲ್ಲದಿದ್ದರೆ, ಈ ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು' ಎಂದು ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯ ಖಡಕ್ ಆಗಿ ಸೂಚಿಸಿತು. ರಾಹುಲ್ ಗಾಂಧಿಯವರ ವಕೀಲರು 'ದ್ವೇಷ ಪ್ರಚೋದನೆ ಉದ್ದೇಶವಿರಲಿಲ್ಲ' ಎಂದು ವಾದಿಸಿದರೂ, ನ್ಯಾಯಾಲಯ ಇಂತಹ ಹೇಳಿಕೆಗಳಿಂದ ದೂರವಿರುವಂತೆ ಎಚ್ಚರಿಕೆ ನೀಡಿದೆ.