Asianet Suvarna News Asianet Suvarna News

ಸಹೋದ್ಯೋಗಿ ಜತೆ ‘ಸರಸ ಸಲ್ಲಾಪದ ಮಾತು’: TTD ಚಾನೆಲ್‌ ಮುಖ್ಯಸ್ಥ ರಾಜೀನಾಮೆ!

ಸಹೋದ್ಯೋಗಿಯೊಬ್ಬರ ಜತೆ ‘ಸರಸ ಸಲ್ಲಾಪದ ಮಾತು’| ವೆಂಕಟೇಶ್ವರ ಚಾನೆಲ್‌ ಮುಖ್ಯಸ್ಥ ರಾಜೀನಾಮೆ

TTD devotional channel chairman resigns after audio chat with lady employee
Author
Bangalore, First Published Jan 13, 2020, 8:52 AM IST

ತಿರುಪತಿ[ಜ.13]: ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಸಮಿತಿ ನಡೆಸುವ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್‌ (ಎಸ್‌ವಿಬಿಸಿ) ಚಾನೆಲ್‌ ಮುಖ್ಯಸ್ಥ ಹಾಗೂ ಹಾಸ್ಯ ನಟ ಪೃಥ್ವಿರಾಜ್‌ ಅವರು ತಮ್ಮ ಹುದ್ದೆಗೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಸಹೋದ್ಯೋಗಿಯೊಬ್ಬರ ಜತೆ ‘ಸರಸ ಸಲ್ಲಾಪದ ಮಾತು’ಗಳನ್ನು ಅವರು ಆಡಿದ್ದಾರೆ ಎನ್ನಲಾದ ಆಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾದ ಕಾರಣ ಅವರು ರಾಜೀನಾಮೆ ನೀಡಿದ್ದಾರೆ. ‘ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದು, ಈ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ’ ಎಂದು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು ಐಟಿ ಕಂಪನಿ ಮಾಲೀಕನಿಂದ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ!

ಆದರೆ ತಮ್ಮ ಸಂಭಾಷಣೆ ತಿರುಚಲಾಗಿದೆ ಎಂದು ಪೃಥ್ವಿರಾಜ್‌ ಆರೋಪಿಸಿದ್ದಾರೆ.

Follow Us:
Download App:
  • android
  • ios