ರದ್ದಾಗಿದ್ದ ಮರಾಠಾ ಮೀಸಲು ಬೇರೆ ರೂಪದಲ್ಲಿ ಜಾರಿ!
* ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲು
* ರದ್ದಾಗಿದ್ದ ಮರಾಠಾ ಮೀಸಲು ಬೇರೆ ರೂಪದಲ್ಲಿ ಜಾರಿ
* ಒಬಿಸಿ ಬದಲು ಇಡಬ್ಲ್ಯುಎಸ್ ವಿಭಾಗದಲ್ಲಿ ಮೀಸಲಿಗೆ ಆದೇಶ
ಮುಂಬೈ(ಜೂ.01): ಮಹಾರಾಷ್ಟ್ರದಲ್ಲಿ ಪ್ರಬಲ ಸಮುದಾಯವಾದ ‘ಮರಾಠ’ ಸಮುದಾಯದ ಹಿಂದುಳಿದ ವರ್ಗದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಈಗ ಪರ್ಯಾಯ ಮಾರ್ಗ ಕಂಡುಕೊಂಡಿದ್ದು, ಮರಾಠರಿಗೆ ಆರ್ಥಿಕ ಹಿಂದುಳಿದ ವರ್ಗಗಳ (ಇಡಬ್ಲ್ಯುಎಸ್) ಕೋಟಾ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.10 ಮೀಸಲಾತಿಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ.
ಮಹಾರಾಷ್ಟ್ರದಲ್ಲಿ ಮರಾಠ ಮೀಸಲು ರದ್ದು : ಸುಪ್ರೀಂ ಮಹತ್ವದ ಆದೇಶ!
2018ರಲ್ಲಿ ಮಹಾರಾಷ್ಟ್ರ ಸರ್ಕಾರವು ಮರಾಠ ಸಮುದಾಯಕ್ಕೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ನೌಕರಿಯಲ್ಲಿ ಶೇ.13ರಷ್ಟುಒಬಿಸಿ ಮೀಸಲಾತಿ ನೀಡಿತ್ತು. ಆದರೆ ಮೀಸಲಾತಿ ಶೇ.50 ಮೀರಬಾರದು ಎಂಬ ಕಾರಣಕ್ಕೆ 2021ರ ಮೇ 5ರಂದು ಮರಾಠರ ಮೀಸಲಾತಿಯನ್ನು ಸುಪ್ರೀಂ ರದ್ದುಗೊಳಿಸಿತ್ತು.
'ಮರಾಠ ನಿಗಮ ಹಿಂಪಡೆಯದಿದ್ದರೆ ಸಾಹಿತ್ಯ ಸಮ್ಮೇಳನ ನಡೆಸಲು ಬಿಡಲ್ಲ’
ಆ ಬಳಿಕ, ಮರಾಠರಿಗೆ ಮೀಸಲಾತಿ ಕಲ್ಪಿಸಲೇಬೇಕೆಂದು ಮಹಾರಾಷ್ಟ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶದಿಂದ ತಪ್ಪಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ವರ್ಗಗಳಡಿ ಮರಾಠರಿಗೆ ಶೇ.10 ಮೀಸಲಾತಿ ಕಲ್ಪಿಸಿದೆ.