Asianet Suvarna News Asianet Suvarna News

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ, ಅಮಿತ್‌ ಶಾ ಹೇಳಿಕೆ


370ನೇ ವಿಧಿ ರದ್ದತಿ ಹಾಗೂ ರಾಮ ಮಂದಿರದ ಯಶಸ್ಸಿನ ಬಳಿಕ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಕಾರ್ಯಕ್ಕೆ ಸಜ್ಜಾಗಿದ್ದು, ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
 

Union Home Minister Amit Shah says CAA will be implemented before Lok Sabha polls san
Author
First Published Feb 10, 2024, 8:03 PM IST

ನವದೆಹಲಿ (ಫೆ.10): ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಕಾಯ್ದೆಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. 2019ರಲ್ಲಿ ಜಾರಿಗೊಳಿಸಲಾದ ಸಿಎಎ ಸಂಬಂಧ ನಿಯಮಗಳನ್ನು ಚುನಾವಣೆಗೂ ಮುನ್ನ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. "ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ (ಸಿಎಎ ವಿರುದ್ಧ) ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಇರುವಂಥ ಕಾಯ್ದೆಯಲ್ಲ' ಎಂದು ಹೇಳಿದ್ದಾರೆ. ಎಕಾನಾಮಿಕ್‌ ಟೈಮ್ಸ್‌ನೌನ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಅಮಿತ್‌ ಶಾ ಈ ವಿಚಾರ ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ ಮತ್ತು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಹ ತಾವು ಮತ್ತೆ ವಿರೋಧ ಪಕ್ಷದ ಬೆಂಚ್‌ಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಈಗಾಗಲೇ ಅರಿತುಕೊಂಡಿವೆ ಎಂದು ತಿಳಿಸಿದ್ದಾರೆ. "ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ (ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ  ನೀಡಿದ್ದ ಕಾಯ್ದೆ) ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ.

ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕುಟುಂಬದಲ್ಲಿ ನಂಬಿಕೆ ಇರಿಸಿದೆ. ಆದರೆ ರಾಜಕೀಯದಲ್ಲಿ ಅಲ್ಲ ಎಂದು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಪಕ್ಷಗಳು ಎನ್‌ಡಿಎಗೆ ಸೇರುವ ಸೂಚನೆ ನೀಡಿದ್ದಾರೆ. ಶಿರೋಮಣಿ ಅಕಾಲಿ ದಳವನ್ನು ಎನ್‌ಡಿಎಗೆ ಸೇರಿಸಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಆದರೆ, ಯಾವುದೂ ಅಂತಿಮವಾಗಿಲ್ಲ ಎಂದಿದ್ದಾರೆ.

2024 ರ ಚುನಾವಣೆಯು ಎನ್‌ಡಿಎ ಮತ್ತು ಭಾರತದ ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ, ಆದರೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಮಾತನಾಡಿದ ಅವರು, 1947 ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾಗಿರುವುದರಿಂದ ನೆಹರು-ಗಾಂಧಿ ವಂಶಸ್ಥರಿಗೆ ಇಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದಿದ್ದಾರೆ.

ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಟೈಮಿಂಗ್‌ ಬಗ್ಗೆ ಕೇಳಲಾದ ಪ್ರಶ್ನೆಗೆ,  2014 ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಮೈತ್ರಿ (ಯುಪಿಎ) ಯಾವ ಗೊಂದಲವನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ ಎಂದು ಹೇಳಿದರು.“ಆ ಸಮಯದಲ್ಲಿ (2014) ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು, ಎಲ್ಲೆಡೆ ಹಗರಣಗಳಿದ್ದವು. ವಿದೇಶಿ ಹೂಡಿಕೆ ಬರುತ್ತಿರಲಿಲ್ಲ, ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು' ಎಂದು ಹೇಳಿದ್ದಾರೆ. ಆದರೆ 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದಿದ್ದಾರೆ

ಸಿಎಎ, ಸಮಾನ ನಾಗರಿಕ ಸಂಹಿತೆ ಜಾರಿ ಆಗೋದು ಗ್ಯಾರಂಟಿ: ಪ್ರಮೋದ ಮುತಾಲಿಕ್

ಅಯೋಧ್ಯೆಯ ರಾಮ ಮಂದಿರದ ಕುರಿತು ಮಾತನಾಡಿದ ಅಮಿತ್‌ ಶಾ,  ಶ್ರೀರಾಮನ ಜನ್ಮಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಬೇಕು ಎಂದು ದೇಶದ ಜನರು 500-550 ವರ್ಷಗಳಿಂದ ಕಾಯುತ್ತಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿರಲಿಲ್ಲ ಎಂದರು.
ಏಕರೂಪ ನಾಗರಿಕ ಸಂಹಿತೆಯ ಕುರಿತು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ ಎಂದ ಅಮಿತ್‌ ಶಾ, ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ" ಎಂದು ಅವರು ಹೇಳಿದರು.

ಮುಸ್ಲಿಮರು ಬೀದಿಗಿಳಿದರೆ ಸಿಎಎ(ಪೌರತ್ವಕಾಯ್ದೆ) ಅನುಷ್ಠಾನ ಕಷ್ಟ: ಅಮ್ನೆಸ್ಟಿ!

Follow Us:
Download App:
  • android
  • ios