Asianet Suvarna News Asianet Suvarna News

ಆರೆಸ್ಸೆಸ್‌ ಕಚೇರಿ ಗೇಟ್‌ಗೆ ಮೂತ್ರ ವಿಸರ್ಜನೆ: ತಡೆದಿದ್ದಕ್ಕೆ ಕಲ್ಲು ತೂರಾಟ ಹಲ್ಲೆ

ಇಲ್ಲಿನ ಆರ್‌ಎಸ್‌ಎಸ್‌ ಕಚೇರಿ ಗೇಟಿಗೆ ವ್ಯಕ್ತಿಯೊಬ್ಬ ಮೂತ್ರ ಮಾಡಿದ್ದನ್ನು ತಡೆದಿದ್ದಕ್ಕಾಗಿ ಉದ್ರಿಕ್ತರ ಗುಂಪೊಂದು ಆರ್‌ಎಸ್‌ಎಸ್‌ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.

Uttar Pradesh a group of agitators pelted stones on the RSS office gate for preventing a person from urinating on the gate of the RSS office akb
Author
First Published Aug 4, 2023, 7:14 AM IST | Last Updated Aug 4, 2023, 11:37 AM IST

ಶಹಜಹಾನ್‌ಪುರ (ಉ.ಪ್ರ): ಇಲ್ಲಿನ ಆರ್‌ಎಸ್‌ಎಸ್‌ ಕಚೇರಿ ಗೇಟಿಗೆ ವ್ಯಕ್ತಿಯೊಬ್ಬ ಮೂತ್ರ ಮಾಡಿದ್ದನ್ನು ತಡೆದಿದ್ದಕ್ಕಾಗಿ ಉದ್ರಿಕ್ತರ ಗುಂಪೊಂದು ಆರ್‌ಎಸ್‌ಎಸ್‌ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ವ್ಯಕ್ತಿ ಮೂತ್ರ ಮಾಡಿದ್ದನ್ನು ಕಂಡ ಆರ್‌ಎಸ್‌ಎಸ್‌ ಕಾರ್ಯಕರ್ತ, ಇಲ್ಲಿ ಮೂತ್ರ ಮಾಡಬಾರದು ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡ ವ್ಯಕ್ತಿ ಸುಮಾರು 50 ಜನರೊಂದಿಗೆ ಕಚೇರಿಗೆ ನುಗ್ಗಿ ಕಲ್ಲು ತೂರಾಟ, ಫೈರಿಂಗ್‌ ನಡೆಸಿದ್ದಾನೆ. ಇದರ ಪರಿಣಾಮ ಮೂವರು ಕಾರ್ಯಕರ್ತರಿಗೆ ಗಾಯಗಳಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಪೊಲೀಸರು 40 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಮೂತ್ರ ಮಾಡಿದವ ಸೇರಿ ಮೂವರನ್ನು ಬಂಧಿಸಿದ್ದಾರೆ. ಮಿಕ್ಕವರಿಗೆ ಬಲೆ ಬೀಸಿದ್ದಾರೆ.

ಉತ್ತರಪ್ರದೇಶದ ಶಹಜಾನ್‌ಪುರದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಬಳಿ ಬುಧವಾರ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿತ್ತು. ಶಶಾಂಕ್ ಗುಪ್ತಾ ಎಂಬಾತ ಆರ್‌ಎಸ್‌ಎಸ್‌ನ ಕಾಂಪೌಂಡ್‌ಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ನೋಡಿದ ಕೆಲ ಆರ್‌ಎಸ್‌ಎಸ್ ಕಾರ್ಯಕರ್ತರು ಆತನಿಗೆ ಅಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹೇಳಿದ್ದಾರೆ. ಈ ವೇಳೆ ಆತ ಆರ್‌ಎಸ್ಎಸ್ ಕಾರ್ಯಕರ್ತರಿಗೆ ಅವ್ಯಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಂತರ ತನ್ನ ಸಹಚರರನ್ನು ಸ್ಥಳಕ್ಕೆ ಕರೆಸಿಕೊಂಡ ಆತ, ಆರ್‌ಎಸ್‌ಎಸ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ಮೂತ್ರ ಮಾಡ್ಬೇಡ ಎಂದರ ಮೇಲೆ ಹಲ್ಲೆ ಮಾಡಿಸಿದ್ದಾನೆ.  ನಂತರ ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಆರೆಸ್ಸೆಸ್ಸಗೂ ತಲೆನೋವಾದ ಪುತ್ತಿಲ ಪರಿವಾರ: ಬೇಡಿಕೆ ಕಂಡು ಬಿಜೆಪಿ ಮುಖಂಡರೇ ಹೈರಾಣು! 

ಆರೋಪಿಗಳು ನಮ್ಮ ಮೇಲೆ ಕಲ್ಲೆಸಿದ್ದಿದ್ದಲ್ಲದೇ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂವರು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ ಎಂದು ಆರ್‌ಎಸ್‌ಎಸ್ ಕಚೇರಿಯ ವಕ್ತಾರರೊಬ್ಬರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆರೋಪಿಗಳಾದ ಶಶಾಂಕ್ ಗುಪ್ತ, ಶಿವಾಂಕ್ ಗುಪ್ತ, ಮುಕೇಶ್ ಗುಪ್ತಾ ಎಂಬುವವರನ್ನು ಬಂಧಿಸಲಾಗಿದೆ. ಶಂಶಾಕ್ ಹಾಗೂ ಶಿವಾಂಕ್ ಸಹೋದರರಾಗಿದ್ದು, ಮುಕೇಶ್ ಇವರಿಬ್ಬರ ತಂದೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios