Asianet Suvarna News Asianet Suvarna News

ವಿಶಾಖಪಟ್ಟಣ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ. ಘೋಷಿಸಿದ ಜಗನ್!

ವಿಷಾಖಪಟ್ಟಣಂ ಅನಿಲ ಸೋರಿಕೆ ದುರಂತ| ವಿಷಾನಿಲ ಸೇವಿಸಿ 11 ಸಾವು, ಅನೇಕರ ಸ್ಥಿತಿ ಚಿಂತಾಜನಕ| ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ ಸಿಎಂಜಗನ್ ಮೋಹನ್ ರೆಡ್ಡಿ

Vizag Gas Leak Andhra CM announces Rs 1 crore compensation for kin of deceased
Author
Bangalore, First Published May 7, 2020, 4:17 PM IST

ವಿಶಾಖಪಟ್ಟಣಂ(ಮೇ.07) ಎಲ್‌ಜಿ ಪಾಲಿಮರ್ಸ್ ರಾಸಾಯನಿಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಾನಿಲದಿಂದ ಇಬ್ಬರು ಮಕ್ಕಳು ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಹೀಗಿರುವಾಗ ದುರಂತ ಸಂಬಂಧ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

"

ವೈಜಾಗ್‌ನಲ್ಲಿ ಮಹಾ ದುರಂತಕ್ಕೆ ಕಾರಣವಾದ ಗ್ಯಾಸ್‌ ಎಷ್ಟು ಅಪಾಯಕಾರಿ, ಗೊತ್ತಾ?

"

ಜನರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿರುವ ಸಿಎಂ ಜಗನ್ ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ಇಷ್ಟೇ ಅಲ್ಲದೇ ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಹಾಗೂ ತೀವ್ರ ಅಸ್ವಸ್ಥಗೊಂಡವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಮತ್ತು ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದ್ದಾರೆ. ಇವೆಲ್ಲವನ್ನು ಹೊರತುಪಡಿಸಿ ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುವುದಾಗಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

"

ಉಸಿರಾಡೋ ಗಾಳಿಯೇ ವಿಷವಾದಾಗ: ವಿಷಾನಿಲ ಸೇವಿಸಿ ನರಳಾಡಿದ ಜನ!

ಈಗಾಗಲೇ ಸಿಎಂ ಜಗನ್ ಮೋಹನ್ ರೆಡ್ಡಿ ವಿಶಾಖಪಟ್ಟಣದಲ್ಲಿರುವ ಕೆಜಿ ಆಸ್ಪತ್ರೆಗೆ ಭೇಟಿ ನೀಡಿ ವಿಷಾನಿಲದಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದ , ನೊಂದವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಸದ್ಯ ಎಲ್‌ಜಿ ಪಾಲಿಮರ್ಸ್ ಸುತ್ತಲಿನ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇಷ್ಟೇ ಅಲ್ಲದೇ  ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದು, ವಿಷಾನಿಲದ ಪರಿಣಾಮವನ್ನು ತಗ್ಗಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.

Follow Us:
Download App:
  • android
  • ios