ಪಶ್ಚಿಮ ಬಂಗಾಳದ ಬದುರಿಯಾದಲ್ಲಿರುವ ಟಿಎಂಸಿ ಕಚೇರಿ ಬಳಿ ಭೂಗತವಾಗಿ ಹೂತಿಟ್ಟಿದ್ದ 500 ರೂ. ಮುಖಬೆಲೆಯ ನೋಟುಗಳಿದ್ದ ಚೀಲಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಟಿಎಂಸಿ ನಾಯಕ ದೀಪಂಕರ್ ಭಟ್ಟಾಚಾರ್ಯ ಅವರ ಬಂಧನದ ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಈ ಹಣ ಪತ್ತೆಯಾಗಿದೆ.

ಕೋಲ್ಕತಾ (ಮೇ.28): ಪಶ್ಚಿಮ ಬಂಗಾಳ(West bengal)ದ ಬದುರಿಯಾ(Baduriya)ದಲ್ಲಿರುವ ತೃಣಮೂಲ ಕಾಂಗ್ರೆಸ್‌ ಕಚೇರಿ(TMC office) ಬಳಿ ಭೂಗತವಾಗಿ ಹಲವು ಚೀಲಗಳಲ್ಲಿ ತುಂಬಿಡಲಾಗಿದ್ದ 500 ರು. ಮುಖಬೆಲೆಯ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧ

ಸರ್ಕಾರದ ಪರಿಹಾರ ಯೋಜನೆಯಲ್ಲಿ ಅವ್ಯವಹಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಎಂಸಿ ಹಿರಿಯ ನಾಯಕ ಮತ್ತು ಬದುರಿಯಾ ಪುರಸಭೆ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ ಬಂಧನ(Deepankar Bhattacharya arrested) ಬಳಿಕ ನಡೆದ ಶೋಧ ಕಾರ್ಯಾಚರಣೆ ವೇಳೆ ಹಣದ ಚೀಲಗಳು ಪತ್ತೆಯಾಗಿವೆ.

ಅನುಮಾನಸ್ಪದ ಚಟುವಟಿಕೆ

ಮಂಗಳವಾರ ತಡರಾತ್ರಿ ಪಕ್ಷದ ಕಚೇರಿ ಸಮೀಪ ಅನುಮಾನಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆ ಬುಧವಾರ ಪೊಲೀಸರು ಟಿಎಂಸಿ ಕಚೇರಿ ಬಳಿ ಶೋಧ ನಡೆಸಿದ್ದಾರೆ. ಈ ವೇಳೆ ಹೂತಿಟ್ಟಿದ್ದ 500 ರು.ನೋಟುಗಳ ಬಂಡಲ್‌ಗಳನ್ನು ಪತ್ತೆಹಚ್ಚಿದ್ದು, 4 ದೊಡ್ಡ ಚೀಲಗಳನ್ನು ಪೊಲೀಸರು ಹೊತ್ತುಕೊಂಡು ಹೋಗುತ್ತಿರುವ ದೃಶ್ಯಗಳು ಸೆರೆಯಾಗಿದೆ. ಕೋಟ್ಯಂತರ ಹಣವಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಮೊತ್ತ ಪತ್ತೆಯಾಗಿಲ್ಲ.

Scroll to load tweet…