ಇಡಿ ನೋಟಿಸ್ ಗಳನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಅಭಿಷೇಕ್ ಬ್ಯಾನರ್ಜಿಅರ್ಜಿಗಳನ್ನು ವಜಾ ಮಾಡಿ ಆದೇಶ ಹೊರಡಿಸಿದ್ದ ದೆಹಲಿ ಹೈಕೋರ್ಟ್ಮತ್ತೆ ಹೊಸದಾಗಿ ಸಮನ್ಸ್ ಜಾರಿ ಮಾಡಿದ ಜಾರಿ ನಿರ್ದೇಶನಾಲಯ
ನವದೆಹಲಿ (ಮಾ. 18): ಪಶ್ಚಿಮ ಬಂಗಾಳದಲ್ಲಿ (West Bengal) ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ (Coal Scam) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (money laundering case) ವಿಚಾರಣೆಗಾಗಿ ಟಿಎಂಸಿ (TMC) ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee) ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯವು ( Enforcement Directorate) ಹೊಸದಾಗಿ ಸಮನ್ಸ್ (summons )ಜಾರಿ ಮಾಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ( National General Cecretary of the Trinamool Congress ) ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಬ್ಯಾನರ್ಜಿ ( Rujira Banerjee) ಮುಂದಿನ ವಾರ ತನಿಖಾ ಅಧಿಕಾರಿಯ ಮುಂದೆ ಹಾಜರಿರಬೇಕು ಎಂದು ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಮಾರ್ಚ್ 21 ರಂದು ಸಂಸದರಿಗೆ ಹಾಜರಾಗುವಂತೆ ತಿಳಿಸಲಾಗಿದ್ದು, ಮರುದಿನ ಅವರ ಪತ್ನಿ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಮಾರ್ಚ್ 11 ರಂದು ದೆಹಲಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸ ಸಮನ್ಸ್ ಬಂದಿದ್ದು, ಕಳೆದ ವರ್ಷ ಸೆಪ್ಟೆಂಬರ್ 10 ರಂದು ತಮಗೆ ನೀಡಲಾದ ಈ ನೋಟಿಸ್ಗಳನ್ನು ಪ್ರಶ್ನಿಸಿ ದಂಪತಿಗಳು ಮಾಡಿದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಸೆಪ್ಟೆಂಬರ್ 2021 ರಲ್ಲಿ ನೀಡಲಾದ ಸಮನ್ಸ್ ನಲ್ಲಿಯೂ ರಾಷ್ಟ್ರ ರಾಜಧಾನಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿ ಮುಂದೆ ಹಾಜರಾಗುವಂತೆ ಸೂಚಿಸಿದೆ. ತಾವು ಪಶ್ಚಿಮ ಬಂಗಾಳದ ನಿವಾಸಿಗಳಾಗಿರುವುದರಿಂದ ದೆಹಲಿಗೆ ಹಾಜರಾಗುವಂತೆ ಫೆಡರಲ್ ಏಜೆನ್ಸಿಯು ತಮ್ಮನ್ನು ಕೇಳಬಾರದು ಎಂದು ಆಗ್ರಹಿಸಿ ದಂಪತಿಗಳು ಹೈಕೋರ್ಟ್ ಮಧ್ಯಸ್ಥಿಕೆಯನ್ನು ಕೋರಿದ್ದರು. ಈ ವಿಚಾರಣೆಯ ಸಂದರ್ಭದಲ್ಲಿ ಇಡಿಯನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಮಗೆ ನೀಡಲಾದ ಸಮನ್ಸ್ಗಳನ್ನು ಪ್ರಶ್ನಿಸಿ ದಂಪತಿಗಳು ಸಲ್ಲಿಸಿದ ಮನವಿಯನ್ನು ವಿರೋಧಿಸಿದರು, ಪಿಎಂಎಲ್ಎ ಅಡಿಯಲ್ಲಿರುವ ಬರಲಿರುವ ಪ್ರಕರಣದಲ್ಲಿ ಇಡಿ ತನಿಖೆಯ ಅಧಿಕಾರವು ಒಂದು ಪ್ರದೇಶ, ಪೊಲೀಸ್ ಠಾಣೆ ಅಥವಾ ರಾಜ್ಯಕ್ಕೆ ಸೀಮಿತವಾಗಿಲ್ಲ. ಇಡಿಯು ಈ ಹಂತದಲ್ಲಿ ಗಡಿ ದಾಟಿ ಕೂಡ ಹೋಗಬಹುದು ಎಂದು ಹೇಳಿದ್ದರು.
ಬ್ಯಾನರ್ಜಿ ದಂಪತಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಅರ್ಜಿದಾರರನ್ನು ರಾಷ್ಟ್ರ ರಾಜಧಾನಿಗೆ ಕರೆಸುವ ನಿರ್ದಿಷ್ಟ ಅಧಿಕಾರವನ್ನು ನೀಡುವ ಕಾನೂನಿನ ನಿಬಂಧನೆಯನ್ನು ತೋರಿಸಲು ತನಿಖಾ ಸಂಸ್ಥೆ ವಿಫಲವಾಗಿದೆ ಎಂದು ವಾದಿಸಿದ್ದರು.
ಸೋದರಳಿಯ ಅಭಿಷೇಕ್, ಮಮತಾ ಮಧ್ಯೆ ಭಿನ್ನಾಭಿಪ್ರಾಯ: ಟಿಎಂಸಿಯಲ್ಲಿ ಹೊಸ ಕಾರ್ಯಕಾರಿ ಸಮಿತಿ!
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಕೋಲ್ಕತ್ತಾದ ನಿವಾಸಿಗಳು ಎಂಬ ಅರ್ಜಿದಾರರ ವಾದವನ್ನು ಆಕ್ಷೇಪಿಸಿದ್ದರು.ಅಭಿಷೇಕ್ ಬ್ಯಾನರ್ಜಿ ಅವರು ಸಂಸತ್ತಿನ ಸದಸ್ಯರಾಗಿರುವ ಕಾರಣ ದೆಹಲಿಯ ವಿಳಾಸವನ್ನು ಹೊಂದಿದ್ದಾರೆ, ಸಂಸತ್ತು ಅಧಿವೇಶನ ನಡೆಯುತ್ತಿರುವಾಗ ಅವರು ಇಲ್ಲಿಯೇ ಇರುತ್ತಾರೆ ಎಂದು ಹೇಳಿದ್ದರು. ಡೈಮಂಡ್ ಹಾರ್ಬರ್ನ ಟಿಎಂಸಿ ಸಂಸದ ಬ್ಯಾನರ್ಜಿ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಷ್ಟ್ರ ರಾಜಧಾನಿಯ ಏಜೆನ್ಸಿ ಕಚೇರಿಯಲ್ಲಿ ಈ ಪ್ರಕರಣದಲ್ಲಿ ಒಮ್ಮೆ ಇಡಿ ವಿಚಾರಣೆ ಮಾಡಿದೆ. ರುಜಿರಾ ಬ್ಯಾನರ್ಜಿ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಲಾಗಿತ್ತು. ಆದರೆ ಕೋವಿಡ್-19 ಕಾರಣವನ್ನು ನೀಡಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
West Bengal Politics: ಮಮತಾ, ಪ್ರಶಾಂತ್ ಕಿಶೋರ್ ಸಂಬಂಧದಲ್ಲಿ ಬಿರುಕು, ಎಮರ್ಜೆನ್ಸಿ ಮೀಟಿಂಗ್
ರಾಜ್ಯದ ಕುನುಸ್ಟೋರಿಯಾ ಮತ್ತು ಕಜೋರಾ ಪ್ರದೇಶಗಳಲ್ಲಿನ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಕಳ್ಳತನದ ಹಗರಣವನ್ನು ಆರೋಪಿಸಿ ಸಿಬಿಐ ದಾಖಲಿಸಿದ ನವೆಂಬರ್ 2020 ರ ಎಫ್ಐಆರ್ ಆಧರಿಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ಅಸನ್ಸೋಲ್ ಮತ್ತು ಸುತ್ತಮುತ್ತ. ಸ್ಥಳೀಯ ಕಲ್ಲಿದ್ದಲು ನಿರ್ವಾಹಕ ಅನುಪ್ ಮಾಝಿ ಅಲಿಯಾಸ್ ಲಾಲಾ ಪ್ರಕರಣದ ಪ್ರಮುಖ ಶಂಕಿತ ಎಂದು ಆರೋಪಿಸಲಾಗಿದೆ. 34 ವರ್ಷದ ಟಿಎಂಸಿ ಸಂಸದರು ಈ ಅಕ್ರಮ ವಹಿವಾಟಿನಿಂದ ಪಡೆದ ಹಣದ ಫಲಾನುಭವಿ ಎಂದು ಇಡಿ ಹೇಳಿಕೊಂಡಿತ್ತು. ಆದರೆ, ಅಭಿಷೇಕ್ ಬ್ಯಾನರ್ಜಿ ಈ ಆರೋಪವನ್ನು ನಿರಾಕರಿಸಿದ್ದಾರೆ.
