ನಂದಿಗ್ರಾಮದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಬಿಡುಗಡೆಯಾಗಿದ್ದಾರೆ. ಹೆಚ್ಚಿನ ವಿವರ ಇಲ್ಲಿವೆ.

ಕೋಲ್ಕತಾ(ಮಾ.12): ನಂದಿಗ್ರಾಮದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಸಿಎಂ ಮಮತಾ ಬ್ಯಾನರ್ಜಿ ಇದೀಗ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಮಾರ್ಚ್ 10ರಂದು ಗಾಯಗೊಂಡಿದ್ದ ದೀದಿ, ದಿಢೀರ್ ಆಸ್ಪತ್ರೆ ದಾಖಲಾಗಿದ್ದರು. ವೈದ್ಯಕೀಯ ನಿರ್ಬಂಧನೆಗಳೊಂದಿಗೆ ದೀದಿಯನ್ನು ಬಿಡುಗಡೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೀದಿ ಗಾಯ​ಗೊಂಡಿದ್ದು ಅಪಘಾತದಲ್ಲಿ : ನಿಜವಾಗಿಯೂ ಆಗಿದ್ದೇನು?

ನಂದಿಗ್ರಾಮದಲ್ಲಿ ಕಾಲು, ಭುಜಕ್ಕೆ ಗಾಯಗಳಾಗಿತ್ತು. ವೈದ್ಯರ ಪ್ರಕಾರ ಕನಿಷ್ಠ 7 ದಿನಗಳ ಚಿಕಿತ್ಸೆ ಅಗತ್ಯವಿತ್ತು. ಆದರೆ ಮಮತಾ ಬ್ಯಾನರ್ಜಿ ಅವರ ಸತತ ಮನವಿಯಿಂದ ಬಿಡುಗಡೆ ಮಾಡುತ್ತಿದ್ದೇವೆ. ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಕನಿಷ್ಠ 15 ದಿನಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

ಶಾಂತಿ ಕಾಪಾಡಿ, ವ್ಹೀಲ್‌ ಚೇರ್‌ನಲ್ಲಿದ್ದೇ ಚುನಾವಣೆ ಎದುರಿಸ್ತೀನಿ: ಜನತೆಗೆ ಮಮತಾ ಸಂದೇಶ!

ವೀಲ್ ಚೇರ್ ಮೂಲಕ ಆಸ್ಪತ್ರೆಯಿಂದ ಹೊರಬಂದ ಮಮತಾ ಬ್ಯಾನರ್ಜಿ, ನೇರವಾಗಿ ಕಾರು ಹತ್ತಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದ್ದಾರೆ. ಈ ವೇಳೆ ಟಿಎಂಸಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. 

ನಂದಿಗ್ರಾಮದಿಂದ ಸ್ಪರ್ಧಿಸುತ್ತಿರುವ ಮಮತಾ ಬ್ಯಾನರ್ಜಿ ಪ್ರಚಾರ ನಡೆಸಿದ್ದರು. ಈ ವೇಳೆ ಮಮತಾ ಬ್ಯಾನರ್ಜಿಯನ್ನು ಅಪರಿಚಿತರು ತಳ್ಳಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡ ಎಂದು ಟಿಎಂಸಿ ಹಾಗೂ ಸ್ವತ ಮಮತಾ ಆರೋಪಿಸಿದ್ದರು. ಆದರೆ ಮಮತಾ ಸರ್ಕಾರದ ಪೊಲೀಸರು ನಡೆಸಿದ ತನಿಖೆಯಲ್ಲಿ ಇದು ಆಕಸ್ಮಿಕ ಎಂದು ವರದಿಯಾಗಿದೆ.