ಹೊಂಡಕ್ಕೆ ಬಿದ್ದ ಆನೆ ಮರಿ| ತಾಯಾನೆ ಬಳಿ ತಲುಪಿಸಲು ಹೊತ್ತೊಯ್ದ ಅರಣ್ಯ ಸಿಬ್ಬಂದಿ| ವೈರಲ್ ಆಯ್ತು ಫೋಟೋ

ಚೆನ್ನೈ(ಏ.14): ಡಿಸೆಂಬರ್ 20117ರಲ್ಲಿ, ತಮಿಳುನಾಡಿನಲ್ಲಿ ಅರಣ್ಯ ಸಿಬ್ಬಂದಿಯೊಬ್ಬ ಹೊಂಡದಲ್ಲಿ ಬಿದ್ದಿದ್ದ ಆನೆ ಮರಿಯೊಂದನ್ನು ಎತ್ತಿ ತಾಯಿ ಆನೆ ಬಳಿ ತಲುಪಿಸಲು ತನ್ನ ಹೆಗಲೇ ಮೇಲೇ ಹೊತ್ತು ಸಾಗಿದ್ದ. ಪಳನಿಸ್ವಾಮಿ ಶರದ್‌ಕುಮಾರ್‌ರವರ ಈ ಮಾನವೀಯ ನಡೆ ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವಾಧಿಕಾರಿ ದೀಪಿಕಾ ವಾಜಪೇಯಿ ಈ ಫೋಟೋ ಶೇರ್ ಮಾಡಿಕೊಂಡಿದ್ದು, ಮತ್ತೊಮ್ಮೆ ಜನರ ಮನ ಗೆಲ್ಲುತ್ತಿದೆ.

Add Asianetnews Kannada as a Preferred SourcegooglePreferred

ಸೋಮವಾರದಂದು ದೀಪಿಕಾ ವಾಜಪೇಯಿಯವರು ಪಳನಿಸ್ವಾಮಿ ಶರದ್‌ಕುಮಾರ್‌ರವರ ಫೋಟೋ ಒಂದನ್ನು ಶೇರ್ ಮಾಡಿಕೊಡಿದ್ದು ಇದರಲ್ಲಿ ಅವರು ತನಗಿಂತಲೂ ಅಧಿಕ ತೂಕ ಹೊಂದಿರುವ ಅನೆ ಮರಿಯನ್ನು ಹೆಗಲ ಮೇಲೆ ಹೊತ್ತೊಯ್ಯುತ್ತಿರುವ ದೃಶ್ಯವಿದೆ. ಘಟನೆ ನಡೆದ ಎರಡು ವರ್ಷಗಳ ಬಳಿಕ ಈ ಫೋಟೋ ಮೈಕ್ರೋ ಬ್ಲಾಗಿಂಗ್‌ನಲ್ಲಿ ವೈರಲ್ ಆಗಿದೆ. ಜನರು ಮತ್ತೊಮ್ಮೆ ಈ ಅರಣ್ಯ ಸಿಬ್ಬಂದಿಗೆ ಸಲಾಂ ಎನ್ನತೊಡಗಿದ್ದಾರೆ.

Scroll to load tweet…

ನೆಲ್ಲೀಮಾಲಾದ ದಟ್ಟಾರಣ್ಯದಲ್ಲಿ ಆನೆ ಮರಿಯೊಂದು ತನ್ನ ಗುಂಪಿನಿಂದ ಬೇರ್ಪಟ್ಟು ದಾರಿ ತಪ್ಪಿ, ಹೊಂಡದಲ್ಲಿ ಬಿದ್ದಿತ್ತು. ಈ ಮಾಹಿತಿ ಸಿಕ್ಕ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ಹಹಲವಾರು ಯತ್ನಗಳನ್ನು ನಡೆಸಿದ ಬಳಿಕ ಅದನ್ನು ಮಲೆತ್ತಲಾಗಿತ್ತು. ಹೀಗಿದ್ದರೂ ಗಾಯಗೊಂಡಿದ್ದರಿಂದ ಆನೆಗೆ ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ. ಇಹೀಗಿರುವಾಗ ಪಳನೀಸ್ವಾಮಿ ಆನೆಯನ್ನು ಎತ್ತಿಕೊಂಡೇ ತಾಯಾನೆ ಬಳಿ ತೆರಳಿದ್ದರು.