ಯೋಗಿಗೆ ಚಪ್ಪಲಿಯಲ್ಲಿ ಹೊಡೀಬೇಕು ಎಂದಿದ್ದ ಠಾಕ್ರೆ ಹಳೇ ವಿಡಿಯೋ ಈಗ ವೈರಲ್!
* 'ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತಿದ್ದೆ’ ಎಂದು ಹೇಳಿದ ಕೇಂದ್ರ ಸಚಿವ ನಾರಾಯಣ ರಾಣೆ
* ಯೋಗಿಗೆ ಚಪ್ಪಲಿಯಲ್ಲಿ ಹೊಡೀಬೇಕು ಎಂದಿದ್ದ ಠಾಕ್ರೆ ಹಳೇ ವಿಡಿಯೋ ಈಗ ವೈರಲ್
ಮುಂಬೈ(ಆ.26): ‘ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತಿದ್ದೆ’ ಎಂದು ಹೇಳಿದ ಕೇಂದ್ರ ಸಚಿವ ನಾರಾಯಣ ರಾಣೆ ಬಂಧನದ ಬೆನ್ನಲ್ಲೇ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಉದ್ಧವ್ ಠಾಕ್ರೆ ಹೇಳಿದ್ದ ಹಳೇ ವಿಡಿಯೋ ವೈರಲ್ ಆಗಿದೆ.
2018ರಲ್ಲಿ ಯೋಗಿ ಮಹಾರಾಷ್ಟ್ರಕ್ಕೆ ಬಂದಿದ್ದಾಗ ಚಪ್ಪಲಿ ಹಾಕಿಕೊಂಡೇ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು. ಆ ಸಮಯದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ‘ಶಿವಾಜಿ ಮಹಾರಾಜರಿಗೆ ಯೋಗಿ ಅವಮಾನ ಮಾಡಿದ್ದಾರೆ ಅವರಿಗೆ ಅದೇ ಚಪ್ಪಲಿಯಲ್ಲಿ ಹೊಡೆಯಬೇಕು’ ಎಂದು ಹೇಳಿದ್ದರು. ರಾಣೆ ಬಂಧನದ ನಂತರ ಈ ಹಳೇ ವಿಡಿಯೋ ವೈರಲ್ ಆಗಿದೆ.
ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುವುದಾಗಿ ಹೇಳಿದ್ದಕ್ಕೆ ರಾಣೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಬಂಧನದ 7 ಗಂಟೆಗಳ ನಂತರ ಅವರಿಗೆ ಜಾಮೀನು ದೊರಕಿತ್ತು.