ವಲಸಿಗ ಕಾರ್ಮಿಕರ ವಿರುದ್ಧ ಸದಾ ಕಿಡಿಕಾರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ ಠಾಕ್ರೆ| 'ಕೊರೋನಾ ಸ್ಫೋಟಕ್ಕೆ ವಲಸೆ ಕಾರ್ಮಿಕರೇ ಕಾರಣ'

ಮುಂಬೈ(ಏ.07): ವಲಸಿಗ ಕಾರ್ಮಿಕರ ವಿರುದ್ಧ ಸದಾ ಕಿಡಿಕಾರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ ಠಾಕ್ರೆ, ಇದೀಗ ಮಹಾರಾಷ್ಟ್ರದಲ್ಲಿ ಸೋಂಕು ಸ್ಫೋಟಕ್ಕೂ ವಲಸಿಗ ಕಾರ್ಮಿಕರೇ ಕಾರಣ ಎಂದು ದೂರಿದ್ದಾರೆ.

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ರಾಜ್ಯವಾಗಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಬೇರೆ ರಾಜ್ಯಗಳ ವಲಸೆ ಕಾರ್ಮಿರನ್ನು ಆಕರ್ಷಿಸುತ್ತದೆ. ಆದರೆ ಈ ಕಾರ್ಮಿಕರು ಬರುವ ರಾಜ್ಯಗಳಲ್ಲಿ ಸರಿಯಾಗಿ ಕೊರೋನಾ ಪರೀಕ್ಷೆ ನಡೆಸುತ್ತಿಲ್ಲ.

ಕಳೆದ ವರ್ಷ ಲಾಕ್ಡೌನ್‌ನಲ್ಲಿ ತವರು ರಾಜ್ಯಗಳಿಗೆ ಹೊರಟ ವಲಸೆ ಕಾರ್ಮಿಕರ ಕೊರೋನಾ ಟೆಸ್ಟ್‌ ಮಾಡಬೇಕೆಂದು ಸಲಹೆ ನೀಡಿದ್ದೆ. ಆದರೆ ಅದು ನಡೆಯಲಿಲ್ಲ’ ಎಂದು ಹೇಳಿದ್ದಾರೆ