ಮಗನ ಕೊಂದ ಸೂಚನಾ, ಪತಿ ವೆಂಕಟ್ ಮಧ್ಯೆ ಠಾಣೇಲಿ ಭಾರೀ ವಾಕ್ಸಮರ
ತನ್ನ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪ ಹೊತ್ತಿರುವ ಬೆಂಗಳೂರಿನ ಸ್ಟಾರ್ಟ್ಅಪ್ ಸಿಇಒ ಸೂಚನಾ ಸೇಠ್ ಹಾಗೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಆಕೆಯ ಪತಿ ವೆಂಕಟ್ ರಾಮನ್ ನಡುವೆ ಪೊಲೀಸ್ ಠಾಣೆಯಲ್ಲಿಯೇ ಭಾರೀ ವಾಕ್ಸಮರ ನಡೆದಿದೆ.
![Why did you kill my son Venkat father of the child asked culprit wife Suchana both blamed each other in Police station akb Why did you kill my son Venkat father of the child asked culprit wife Suchana both blamed each other in Police station akb](https://static-ai.asianetnews.com/images/01hktqzmsynd2pjsx34rdqh3d1/suchana-seth_363x203xt.jpg)
ಪಣಜಿ: ತನ್ನ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪ ಹೊತ್ತಿರುವ ಬೆಂಗಳೂರಿನ ಸ್ಟಾರ್ಟ್ಅಪ್ ಸಿಇಒ ಸೂಚನಾ ಸೇಠ್ ಹಾಗೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಆಕೆಯ ಪತಿ ವೆಂಕಟ್ ರಾಮನ್ ನಡುವೆ ಪೊಲೀಸ್ ಠಾಣೆಯಲ್ಲಿಯೇ ಭಾರೀ ವಾಕ್ಸಮರ ನಡೆದಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟ್ ರಾಮನ್ ಪೊಲೀಸರಿಗೆ ಹೇಳಿಕೆ ನೀಡಲು ಗೋವಾದ ಕ್ಯಾಲಂಗುಟ್ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಈ ವೇಳೆ ಅಲ್ಲಿಯೇ ಪೊಲೀಸರ ವಶದಲ್ಲಿದ್ದ ಸೂಚನಾಳೊಂದಿಗೆ ಮಾತನಾಡಲು ವೆಂಕಟ್ಗೆ 15 ನಿಮಿಷ ಅವಕಾಶ ನೀಡಲಾಗಿತ್ತು.
ಆಗ ‘ನನ್ನ ಮಗನ ಏಕೆ ಹತ್ಯೆ ಮಾಡಿದೆ?’ ಎಂದು ವೆಂಕಟ್ ಸೂಚನಾರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸೂಚನಾ ‘ಇದಕ್ಕೆಲ್ಲ ನೀನೇ ಕಾರಣ. ನಾನು ಪೊಲೀಸ್ ಕಸ್ಟಡಿಯಲ್ಲಿದ್ದರೆ, ನೀನು ಫ್ರೀಯಾಗಿ... ಆರಾಮಾಗಿ ಓಡಾಡಿಕೊಂಡಿದ್ದೀಯಲ್ಲಾ’ ಎಂದು ಕಿಚಾಯಿಸಿದ್ದಾಳೆ. ಆಗ ವೆಂಕಟ್ ‘ನನ್ನ ಮಗನನ್ನು ನೀನು ಹತ್ಯೆ ಮಾಡಿಲ್ಲವೇ? ಮಗು ಹೇಗೆ ಮೃತಪಟ್ಟಿತು?’ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಭಾರಿ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
100 ಬ್ರಿಲಿಯಂಟ್ ಮಹಿಳೆಯರ ಲಿಸ್ಟ್ನಲ್ಲಿದ್ದಾಳೆ ಹೆತ್ತ ಮಗನನ್ನೇ ಕೊಂದು ಬ್ಯಾಗ್ನಲ್ಲಿ ಸಾಗಿಸ್ತಿದ್ದ ಪಾಪಿ ತಾಯಿ!
ಪತ್ನಿ ಕ್ರೂರಿ- ವೆಂಕಟ್ ಹೇಳಿಕೆ:
ಇನ್ನು ಪೊಲೀಸರಿಗೆ 2 ಗಂಟೆಗಳ ಕಾಲ ಸುದೀರ್ಘ 5 ಪುಟಗಳ ಹೇಳಿಕೆ ನೀಡಿರುವ ವೆಂಕಟ್, ಸೂಚನಾ ಮೊದಲಿನಿಂದಲೂ ಕ್ರೂರ ಅಥವಾ ಹಿಂಸಾತ್ಮಕ ಮನಸ್ಥಿತಿಯುಳ್ಳವಳು ಎಂದು ತಿಳಿಸಿದ್ದಾರೆ.
'ನಿಮ್ಮ ಬ್ಯಾಗ್ ಯಾಕಿಷ್ಟು ಭಾರವಿದೆ..' ಸುಚನಾ ಸೇಠ್ಗೆ ಕೇಳಿದ್ದ ಡ್ರೈವರ್ ರೇಜಾನ್ ಡಿಸೋಜಾ
ಮಗುವಿನ ಪ್ರಜ್ಞೆ ತಪ್ಪಿಸಲೋಗಿ ಕೊಂದೇಬಿಟ್ಟೆ; ತಪ್ಪೊಪ್ಪಿಕೊಂಡ ಬೆಂಗಳೂರು ಸ್ಟಾರ್ಟಪ್ ಸಿಇಒ ಸುಚನಾ ಸೇಠ್!
ಮಗನನ್ನೇ ಕೊಂದ ಲೇಡಿ ಸಿಇಒ; ತಾಯಿಯರೇಕೆ ಮಕ್ಕಳನ್ನು ಕೊಲ್ಲುತ್ತಾರೆ?
ಗಂಡ 9 ಲಕ್ಷ ದುಡಿತಾನೆ: ನಿರ್ವಹಣೆಗೆ ತಿಂಗಳಿಗೆ 2.5 ಲಕ್ಷ ಕೊಡ್ಬೇಕು : ಮಗನನ್ನೇ ಕೊಂದ ಲೇಡಿ ಸಿಇಒ