ಮಾಜಿ ಸಚಿವ ಯಶವಂತ್ ಸಿನ್ಹಾ ಟಿಎಂಸಿಗೆ ಸೇರ್ಪಡೆ| ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಕಣದಲ್ಲಿ ಮಹತ್ವದ ಬೆಳವಣಿಗೆ| ಬಿಜೆಪಿಗೆ ಬಿಗ್ ಶಾಕ್

ಕೋಲ್ಕತ್ತಾ(ಮಾ.13): ಭಾರತೀಯ ಜನತಾ ಪಕ್ಷದ ಮಾಜಿ ನಾಯಕ ಹಾಗೂ ವಾಜಪೇಯಿ ಅಧಿಕಾರಾವಧಿಯಲ್ಲಿ ವಿತ್ತ ಸಚಿವರಾಗಿದ್ದ ಯಶವಂತ್ ಸಿನ್ಹಾ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.

Add Asianetnews Kannada as a Preferred SourcegooglePreferred

ಯಶವಂತ್ ಸಿನ್ಹಾರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಟಿಎಂಸಿ ಈ ಮಾಹಿತಿಯನ್ನು ಖಚಿತಪಡಿಸಿದೆ. 

ಪಶ್ಚಿಮ ಬಂಗಾಳ ಚುನಾವಣೆ, ಬಿಜೆಪಿಗೆ ಬಿಗ್ ಶಾಕ್!

ಇನ್ನು ಯಶವಂತ್ ಸಿನ್ಹಾ ತಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸುಬ್ರತ್ ಮುಖರ್ಜಿ 'ಯಶವಂತ್ ಸಿನ್ಹಾ ನಮ್ಮ ಜೊತೆಗಿದ್ದಾರೆಂದು ನಮಗೆ ಬಹಳ ಖುಷಿಯಾಗುತ್ತಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಿಂದ ಮಮತಾ ಬ್ಯಾನರ್ಜಿ ಗಾಯಗೊಂಡಿರದಿದ್ದರೆ, ಇಂದು ಖುದ್ದು ಅವರೇ ಇಲ್ಲಿರುತ್ತಿದ್ದರು' ಎಂದಿದ್ದಾರೆ.