ಬರೇಲಿಯಲ್ಲಿ ತರಕಾರಿ ವ್ಯಾಪಾರಿಯೊಬ್ಬರು ಮರದ ಕೆಳಗೆ ಮಲಗಿದ್ದಾಗ ಪೌರಕಾರ್ಮಿಕರು ಕೆಸರು ಸುರಿದ ಪರಿಣಾಮ ಜೀವಂತ ಸಮಾಧಿಯಾದ ಘಟನೆ ನಡೆದಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಪೌರಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬರೇಲಿ (ಮೇ.24): ಉತ್ತರ ಪ್ರದೇಶದ ಬರೇಲಿಯ ಬರಾದರಿ ಪ್ರದೇಶದಲ್ಲಿ ದಾರುಣ ಘಟನೆ ನಡೆದಿದೆ. ಬರೇಲಿಯ ಸ್ಮಶಾನದ ಬಳಿ ಇದ್ದ ಮರದ ಕೆಳಗೆ ಮಲಗಿದ್ದ ತರಕಾರಿ ವ್ಯಾಪಾರಿಯೊಬ್ಬನ ಮೇಲೆ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ತಂಡ ಕೆಸರಿನ ರಾಶಿಯನ್ನು ಸುರಿದ ನಂತರ ಅವರು ಜೀವಂತವಾಗಿ ಸಮಾಧಿಯಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಪೌರಕಾರ್ಮಿಕರ ವಿರುದ್ಧ ಬರಾದರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಎಸ್‌ಪಿ ಅನುರಾಗ್ ಆರ್ಯ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಮಧ್ಯಾಹ್ನ ಕುಡಿದ ಅಮಲಿನಲ್ಲಿದ್ದ ಶಾಂತಿಪುರದ ಸುನೀಲ್ ಕುಮಾರ್ ಪ್ರಜಾಪತಿ (45) ತನ್ನ ಮನೆಯ ಬಳಿಯ ಸ್ಮಶಾನದ ಬಳಿ ಇದ್ದ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ. ಈ ವೇಳೆ ನಯೀಮ್ ನೇತೃತ್ವದ ಪೌರಕಾರ್ಮಿಕರ ತಂಡವು ಕೆಸರು ತುಂಬಿದ ಟ್ರ್ಯಾಕ್ಟರ್-ಟ್ರಾಲಿಯನ್ನು ಅವರ ಮೇಲೆ ಸುರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಟ್ರಾಲಿಯನ್ನು ಓಡಿಸುತ್ತಿದ್ದ ವ್ಯಕ್ತಿ ಪ್ರಜಾಪತಿಯನ್ನು ಗಮನಿಸಲು ವಿಫಲನಾಗಿದ್ದಾನೆ ಎಂದು ಎಸ್‌ಎಸ್‌ಪಿ ಹೇಳಿದರು. ಸ್ವಲ್ಪ ಸಮಯದ ನಂತರ, ಸಂತ್ರಸ್ಥನ ಮಗ ತನ್ನ ತಂದೆಯನ್ನು ಅವಶೇಷಗಳ ಅಡಿಯಲ್ಲಿ ಹೂತುಹಾಕಿರುವುದನ್ನು ಕಂಡು ಸ್ಥಳೀಯರ ಸಹಾಯದಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾನೆ. ಪ್ರಜಾಪತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪುರಸಭೆ ಆಯುಕ್ತ ಸಂಜೀವ್ ಕುಮಾರ್ ಮೌರ್ಯ ಹೇಳಿದ್ದಾರೆ.