'ನನಗೇನಾದರೂ ಆದರೆ ಮೋದಿಯೇ ಹೊಣೆ' ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ರಾಳೇಗಣ ಸಿದ್ಧಿ[ಫೆ.04]: ‘ನನಗೇನಾದರೂ ಹೆಚ್ಚುಕಮ್ಮಿ ಆದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ನೇರ ಹೊಣೆ. ಜನರು ಅವರನ್ನೇ ಕೇಳುತ್ತಾರೆ’ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಕೇಂದ್ರದಲ್ಲಿ ಲೋಕಪಾಲ, ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಸಂಸ್ಥೆ ಸ್ಥಾಪಿಸಲು ಆಗ್ರಹಿಸಿ ‘ಜನ ಆಂದೋಲನ ಸತ್ಯಾಗ್ರಹ’ ಹೆಸರಿನಲ್ಲಿ ಜನವರಿ 30ರಿಂದ ಅನಿರ್ದಿಷ್ಟಾವಧಿ ನಿರಶನ ಕೈಗೊಂಡಿರುವ ಅಣ್ಣಾ , ‘ಮೋದಿ ಸರ್ಕಾರ ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ.

ಅಲ್ಲದೇ ನಾನು ಪದ್ಮ ಪ್ರಶಸ್ತಿ ವಾಪಸು ಮರಳಿಸಬೇಕಾಗುತ್ತದೆ’ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದರು