ಕಸಾಯಿಖಾನೆ ವಿರುದ್ಧ ಪ್ರತಿಭಟನಾಕಾರರ ದಾಳಿಗೆ ಪೊಲೀಸ್ ಅಧಿಕಾರಿ ಬಲಿ
ಅಕ್ರಮ ಗೋ ಸಾಗಾಟ, ಕಸಾಯಿಖಾನೆಗಳ ವಿರುದ್ಧದ ಜನಾಂದೋಲನಗಳ ಮೂಲಕ ಉತ್ತರ ಪ್ರದೇಶದ ಗದ್ದುಗೆ ಏರಿದ್ದ ಯೋಗಿ ಆದಿತ್ಯನಾಥ್ ಅವರಿಗೆ ಇಂದಿನ ಅಕ್ರಮ ಕಸಾಯಿಖಾನೆ ವಿರುದ್ಧದ ಹೋರಾಟ ತಲೆಬಿಸಿಯೇರಿಸಿದೆ.
ಬುಲಂದ್ಶಹರ್( ಉತ್ತರ ಪ್ರದೇಶ), [ಡಿ03]: ಇಂದು [ಸೋಮವಾರ] ಉತ್ತರ ಪ್ರದೇಶದಲ್ಲಿ ದಿಢೀರ್ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಬಲಿಯಾಗಿದ್ದು. ರಾಜಕೀಯ ಅಖಾಡಕ್ಕೆ ವೇದಿಕೆಯಾಗಿದೆ.
ಕಸಾಯಿಖಾನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ನಿಯಂತ್ರಿಸಲು ಮುಂದಾದ ಪೊಲೀಸ್ ಅಧಿಕಾರಿ ಗುಂಪಿನ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿದ್ದ ಅಕ್ರಮ ಕಸಾಯಿಖಾನೆ ವಿರುದ್ಧ ಸ್ಥಳೀಯ ಗುಂಪು ಸೋಮವಾರ ಪ್ರತಿಭಟನೆ ನಡೆಸುತ್ತಿತ್ತು. ಆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಗಲಭೆ ನಿಯಂತ್ರಿಸಲು ಮುಂದಾಗಿದ್ದಾರೆ. ಈ ವೇಳೆ ಪ್ರತಿಭಟನಾ ಕಾರರು ಪೊಲೀಸರ ಮೇಲೆ ಕಲ್ಲುಗಳಿಂದ ದಾಳಿ ಮಾಡಿದ್ದಾರೆ.
One police inspector dead during a clash with people protesting against illegal slaughterhouses in Bulandshahr pic.twitter.com/Ugts7FDtsI
— ANI UP (@ANINewsUP) December 3, 2018
ಅಲ್ಲದೆ, ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಯ ಸಾವು ಸಂಭವಿಸಿರುವ ಬಗ್ಗೆ ಜಿಲ್ಲಾಧಿಕಾರಿ ಅನುಜ್ ಜಾ ಅವರೇ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಘಟನೆಯ ತನಿಖೆಗೂ ಆದೇಶಿಸಲಾಗಿದೆ.