ಹೈದರಾಬಾದ್ ವಿರುದ್ಧ ಟಾಸ್ ಗೆದ್ದ CSK,ತಂಡದಲ್ಲಿ ಮಹತ್ವದ ಬದಲಾವಣೆ!
ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲುವು ಅನಿವಾರ್ಯವಾಗುತ್ತಿದೆ. ಇದೀಗ ಇವರಿಬ್ಬರ ಮುಖಾಮುಖಿ ತೀವ್ರ ಕುತೂಹಲ ಕೆರಳಿಸಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ(ಅ.13): 13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಸತತ ಸೋಲಿನಿಂದ ಟೀಕೆ ಎದುರಿಸುತ್ತಿರು ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಸನ್ರೈಸರ್ಸ್ ಹೈದರಾಬಾದ್ ಸವಾಲಿಗೆ ಸಜ್ಜಾಗಿದೆ. ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.ಜಗದೀಶನ್ ಬದಲು ಪಿಯೂಷ್ ಚಾವ್ಲಾ ತಂಡ ಸೇರಿಕೊಂಡಿದ್ದಾರೆ.ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅಭಿಷೇಕ್ ಶರ್ಮಾ ಬದಲು ಶಹಬಾಝ್ ನದೀಮ್ ತಂಡ ಸೇರಿಕೊಂಡಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ಆಡಿದ 7 ಪಂದ್ಯದಲ್ಲಿ 3 ಗೆಲುವು ಹಾಗೂ 4 ಸೋಲು ಕಂಡಿದೆ. ಈ ಮೂಲಕ 6 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ 7 ಪಂದ್ಯದಲ್ಲಿ ಕೇವಲ 2 ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.