13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ

ಅಬುಧಾಬಿ(ಅ.07): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಕೋಲ್ಕತ ನೈಟ್‌ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಆಯ್ದುಕೊಂಡಿದ್ಧಾರೆ.

ನಿರೀಕ್ಷೆಯಂತೆಯೇ ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲೂ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಪೀಯೂಸ್ ಚಾವ್ಲಾ ಬದಲಿಗೆ ಕರಣ್ ಶರ್ಮಾ ಅವರಿಗೆ ಸ್ಥಾನ ನೀಡಲಾಗಿದೆ.

ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 3ರಲ್ಲಿ ಸೋಲು ಹಾಗೂ 2ರಲ್ಲಿ ಗೆಲುವನ್ನು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ, ಕೋಲ್ಕತ ನೈಟ್‌ ರೈಡರ್ಸ್ ತಂಡವು ಆಡಿದ 4 ಪಂದ್ಯಗಳ ಪೈಕಿ ತಲಾ 2 ಸೋಲು ಹಾಗೂ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ತಂಡಗಳು ಹೀಗಿವೆ: 

ಕೋಲ್ಕತ ನೈಟ್‌ ರೈಡರ್ಸ್

Scroll to load tweet…

ಚೆನ್ನೈ ಸೂಪರ್ ಕಿಂಗ್ಸ್:

Scroll to load tweet…