ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ 75ರಷ್ಟು ಮೀಸಲಾತಿ ಸ್ಥಳೀಯರಿಗೆ

ಚಂಡೀಗಢ (ನ.06): ರಾಜ್ಯದ ಖಾಸಗಿ ವಲಯದ ಶೇ.75ರಷ್ಟುಪ್ರಮಾಣದ ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಾಗಿರಿಸಲು ಅವಕಾಶ ಕಲ್ಪಿಸುವ ಮಸೂದೆಗೆ ಹರ್ಯಾಣ ವಿಧಾನಸಭೆ ಅಂಗೀಕಾರ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರದ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಮನೋಹರ ಲಾಲ್‌ ಖಟ್ಟರ್‌ ನೇತೃತ್ವದ ಬಿಜೆಪಿ ಸರ್ಕಾರ ತಿಳಿಸಿದೆ. ತನ್ಮೂಲಕ ಇಂಥ ಕಾಯ್ದೆ ಜಾರಿಗೆ ತಂದ ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳ ಪಟ್ಟಿಗೆ ಹರಾರ‍ಯಣ ಹೊಸ ಸೇರ್ಪಡೆ. 

ಕೈತುಂಬಾ ಸಂಬಳ ನೀಡುತ್ತೆ ಈ ಟಾಪ್ ಸೈಬರ್ ಸೆಕ್ಯೂರಿಟಿ ಸಂಸ್ಥೆಗಳು ..

ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಟ್ರಸ್ಟ್‌ಗಳು ಸೇರಿದಂತೆ ಇನ್ನಿತರ ಕಂಪನಿಗಳು ಸ್ಥಳೀಯರಿಗೆ ಶೇ.75ರಷ್ಟುಹುದ್ದೆ ಮೀಸಲಿಡುವ ಈ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳಲು ರಾಜ್ಯಪಾಲರ ಅಂಕಿತವೊಂದೇ ಬಾಕಿಯಿದೆ.

ಮುಂಗಾರು ಅಧಿವೇಶನದ 2ನೇ ಭಾಗವಾಗಿ ನಡೆಯುತ್ತಿರುವ ಗುರುವಾರದ ಕಲಾಪದಲ್ಲಿ ಡಿಸಿಎಂ ದುಷ್ಯಂತ್‌ ಚೌಟಾಲ ಅವರು ಈ ಮಸೂದೆಯನ್ನು ಮಂಡಿಸಿದರು. ಈ ಮಸೂದೆಯ ಅಂಗೀಕಾರದೊಂದಿಗೆ ರಾಜ್ಯದ ಜನತೆಗೆ ನೀಡಿದ್ದ ಭರವಸೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಇದರಿಂದ ರಾಜ್ಯದ ಸಾವಿರಾರು ಉದ್ಯೋಗಾಂಕ್ಷಿಗಳಿಗೆ ನೆರವಾಗಲಿದೆ ಎಂದು ಅವರು ಪ್ರತಿಪಾದಿಸಿದರು.