ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಈ ವರ್ಷ ಅನುಕಂಪ ಆಧರಿತ ನೇಮಕಾತಿ ಮಾಡಿಕೊಳ್ಳದಿರಲು ನಿರ್ಧರಿಸಿದೆ. 

ಬೆಂಗಳೂರು (ನ.09): ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಈ ವರ್ಷ ಅನುಕಂಪ ಆಧರಿತ ನೇಮಕಾತಿ ಮಾಡಿಕೊಳ್ಳದಿರಲು ನಿರ್ಧರಿಸಿದೆ.

Add Asianetnews Kannada as a Preferred SourcegooglePreferred

ಸೇವಾ ಅವಧಿಯಲ್ಲಿ ನಿಗಮದ ನೌಕರರು ಅಕಾಲಿಕ ಮರಣಕ್ಕೆ ತುತ್ತಾದರೆ, ಅವರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ಮೇಲೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ನೌಕರಿ ನೀಡಲಾಗುತ್ತದೆ.

ನಿಗಮದಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಅನುಗುಣವಾಗಿ ಅನುಕಂಪ ಆಧಾರಿತ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕೊರೋನಾ ಎಫೆಕ್ಟ್: ರಾಜ್ಯದ ಈ ಹುದ್ದೆಗಳ ನೇಮಕಾತಿ ಸ್ಥಗಿತ ..

ಪ್ರಸ್ತುತ ಕೊರೋನಾ ಸೋಂಕಿನಿಂದ ನಿಗಮದ ಆರ್ಥಿಕ ಸ್ಥಿತಿ ಕುಸಿದಿದ್ದು, ಸುಧಾರಣೆಗೆ ಸರ್ವ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಮುಂದಿನ ಆರ್ಥಿಕ ವರ್ಷ ಅಥವಾ ಮುಂದಿನ ಆದೇಶದವರೆಗೆ ಈ ಅನುಕಂಪ ಆಧರಿತ ನೇಮಕಾತಿ ಪ್ರಕ್ರಿಯೆ ಕೈಗೊಳ್ಳದಿರಲು ನಿಗಮದ ತೀರ್ಮಾನಿಸಿದೆ. ಆದರೆ ಮೃತರ ನೌಕರರ ಕುಟುಂಬದವರು ಅನುಕಂಪ ಆಧರಿತ ನೌಕರರಿಗೆ ಸಲ್ಲಿಸಲಾಗುವ ಅರ್ಜಿಗಳನ್ನು ಸ್ವೀಕರಿಸಲು ಅವಕಾಶ ನೀಡಲಾಗಿದೆ.