ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಕ್ರಮ ಇಂಗ್ಲಿಷ್‌ ಹಾಗೂ ಗಣಿತ ವಿಷಯಗಳ ಅತಿಥಿ ಶಿಕ್ಷಕರ ನೇಮಕಕ್ಕೆ ಹೆಚ್ಚಿನ ಆದ್ಯತೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ

ಯಾದಗಿರಿ (ಆ.16): ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇಂಗ್ಲಿಷ್‌ ಹಾಗೂ ಗಣಿತ ವಿಷಯಗಳ ಅತಿಥಿ ಶಿಕ್ಷಕರ ನೇಮಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

 ನಗರದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾದಗಿರಿ ಮತ್ತಿತರೆ ಜಿಲ್ಲೆಗಳಲ್ಲಿ ಈ ಬಗ್ಗೆ ಹೆಚ್ಚಿನ ಮಹತ್ವ ವಹಿಸಲಾಗುವುದು. ಅತಿಥಿ ಶಿಕ್ಷಕರ ಸಂಭಾವನೆ ಸೇರಿದಂತೆ ಒಂದಿಷ್ಟು ಬೇಡಿಕೆಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು. 

ಏರ್‌ಫೋರ್ಸ್‌ನಲ್ಲಿ ಗ್ರೂಪ್ ‘ಸಿ’ ನಾಗರಿಕ 282 ಹುದ್ದೆಗಳಿಗೆ ನೇಮಕಾತಿ

ಸಿಇಟಿ ಹಾಗೂ ಟಿಇಟಿ ಪರೀಕ್ಷೆಗಳಲ್ಲಿನ ಮಾನದಂಡಗಳಲ್ಲಿ ಏರಿಕೆಯಿದ್ದರಿಂದ ಈ ಭಾಗದಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಬೇರೆ ಜಿಲ್ಲೆಯಿಂದ ನೇಮಕಾತಿಗೊಂಡವರು ಇಲ್ಲಿಗೆ ಬಂದು ವರ್ಗಾವಣೆಗೊಳ್ಳುವುದು ಶಿಕ್ಷಣ ಇಲಾಖೆಯಲ್ಲಷ್ಟೇ ಅಲ್ಲ, ಆರೋಗ್ಯ ಸೇರಿದಂತೆ ಕೆಲವೊಂದು ಇಲಾಖೆಗಳನ್ನೂ ಇದೆ. ಈಗ ಈ ಭಾಗದ ಕೊರತೆ ನೀಗಿಸಲು ಇಲ್ಲಿಗನುಗುಣವಾಗಿ ಶಿಕ್ಷಕರ ನೇಮಕಕ್ಕೆ ಸಿಇಟಿ, ಟಿಇಟಿ ನಡೆಸುವ ಇರಾದೆಯಿದೆ ಎಂದರು.