ಅಖಿಲ ಭಾರತ ಕಾಂಗ್ರೆಸ್ ಪಕ್ಷ, ರಾಜ್ಯದ ಹಿರಿಯ ಮುಖಂಡರು ಸೇರಿದಂತೆ  ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ತೀರ್ಮಾನಿಸಿದೆ. ಬೆಂಬಲ ಪತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನೀಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು(ಮೇ.15): ಎಐಸಿಸಿ ಹಿರಿಯ ನಾಯಕರ ತೀರ್ಮಾನದಂತೆ ಸರ್ಕಾರ ರಚಿಸಲು ಜೆಡಿಎಸ್'ಗೆ ಬೇಷರತ್ ಬೆಂಬಲ ನೀಡಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.<br/>ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಉಭಯ ಪಕ್ಷದ ನಾಯಕರು ಮಾತನಾಡಿದರು.<br/>ಸರ್ಕಾರ ರಚಿಸಲು ಎರಡೂ ಪಕ್ಷಗಳ ಬೆಂಬಲ ಪತ್ರದೊಂದಿಗೆ ರಾಜ್ಯಪಾಲರಿಗೆ ಸರ್ಕಾರ ರಚಿಸಲು ಮನವಿ ಮಾಡಿದ್ದು, ಅನುಮತಿ ದೊರೆತ ನಂತರ ಮುಂದಿನ ಪ್ರಕ್ರಿಯೆಗಳು ಮುಂದುವರಿಯುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದರು

"<br/>ಎಐಸಿಸಿ ತೀರ್ಮಾನ : ಸಿದ್ದು<br/>ಅಖಿಲ ಭಾರತ ಕಾಂಗ್ರೆಸ್ ಪಕ್ಷ, ರಾಜ್ಯದ ಹಿರಿಯ ಮುಖಂಡರು ಸೇರಿದಂತೆ ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ತೀರ್ಮಾನಿಸಿದೆ. ಬೆಂಬಲ ಪತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನೀಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.<br/>ರಾಜ್ಯಪಾಲರು ಒಪ್ಪಿಗೆ ನೀಡಿದ ನಂತರ ಮುಂದಿನ ಬೆಳವಣಿಗೆಗಳು ಮುಂದುವರಿಯಲಿವೆ ಎಂದು ಕುಮಾರಸ್ವಾಮಿ ಕೂಡ ತಿಳಿಸಿದರು.

"