Asianet Suvarna News Asianet Suvarna News

ಬೆಂಗಳೂರಿನಲ್ಲಿ ಪ್ರಚಾರ ಮಾಡುತ್ತಿದ್ದ ಬಿಜೆಪಿ ಅಭ್ಯರ್ಥಿ ಅಸ್ವಸ್ಥ

ಈ ಬಾರಿ ಸ್ಪರ್ಧೆ ಹೆಚ್ಚು ಪೈಪೋಟಿಯಾಗಿದ್ದು ಕಾಂಗ್ರೆಸ್'ನಿಂದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಕಣಕ್ಕಿಳಿದಿದ್ದಾರೆ. ಜೆಡಿಎಸ್'ನಿಂದ ತನ್ವೀರ್ ಅಹ್ಮದ್ ಸ್ಪರ್ಧಿಸಿದ್ದಾರೆ. ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಕುತೂಹಲ ಮೂಡಿಸಿದೆ.  

BJP Candidate Vijayakumar Falls  Unconscious

ಬೆಂಗಳೂರು(ಮೇ.03): ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಜಯನಗರ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಸ್ವಸ್ಥ ಬಿ.ಎನ್. ವಿಜಯ್ ಕುಮಾರ್ ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.  ಜಯನಗರ 4ನೇ ಟಿ ಬ್ಲಾಕ್'ನಲ್ಲಿ ಪಾದಯಾತ್ರೆ ಮಾಡುತ್ತಿದ್ದಾಗ  ಅಸ್ವಸ್ಥಗೊಂಡಿದ್ದಾರೆ. ೨ ತಿಂಗಳ ಹಿಂದೆಯೂ ಉಸಿರಾಟ ತೊಂದರೆಯಿಂದ  ವಿಜಯ್ ಕುಮಾರ್ ಚಿಕಿತ್ಸೆ ಪಡೆದಿದ್ದರು. ಸತತ ೨ ಬಾರಿಯಿಂದ ಜಯನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಬಾರಿ ಸ್ಪರ್ಧೆ ಹೆಚ್ಚು ಪೈಪೋಟಿಯಾಗಿದ್ದು ಕಾಂಗ್ರೆಸ್'ನಿಂದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಕಣಕ್ಕಿಳಿದಿದ್ದಾರೆ. ಜೆಡಿಎಸ್'ನಿಂದ ತನ್ವೀರ್ ಅಹ್ಮದ್ ಸ್ಪರ್ಧಿಸಿದ್ದಾರೆ. ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಕುತೂಹಲ ಮೂಡಿಸಿದೆ.    

Follow Us:
Download App:
  • android
  • ios