ಕರ್ನಾಟಕ ರಾಜಕೀಯ ನಾಟಕ ಕ್ಷಣ ಕ್ಷಣವೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನೇ ಬಿಜೆಪಿ ಹೈಜಾಕ್ ಮಾಡುತ್ತಿದೆ.

ಬೆಂಗಳೂರು: ಕರ್ನಾಟಕ ರಾಜಕೀಯ ನಾಟಕ ಕ್ಷಣ ಕ್ಷಣವೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನೇ ಬಿಜೆಪಿ ಹೈಜಾಕ್ ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರಕಾರ ರಚಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಕಮಲಕ್ಕೆ ಮೊರೆ ಹೋಗುವುದು ಅನಿವಾರ್ಯವಾಗಿದೆ. ಈ ಕಾರಣದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ಸೇರಿರುವ ಶಾಸಕರನ್ನೇ ಹೈಜಾಕ್ ಮಾಡಲು ಮುಂದಾಗಿದೆ.

ಕರಾವಳಿಯಲ್ಲಿ ಬುಡು ಭದ್ರಕೊಡಿಸಿಕೊಂಡ ಬಿಜೆಪಿ

ಈಗಾಗಲೇ ಉತ್ತರ ಕರ್ನಾಟಕ ಭಾಗದ 16 ಶಾಸಕರೊಂದಿಗೆ ಬಿಜೆಪಿ ಸಂಪರ್ಕದಲ್ಲಿದ್ದು, ರಾಜ್ಯ ರಾಜಕೀಯ ಡ್ರಾಮಾದ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. 

ಅತ್ತ ಜೆಡಿಎಸ್-ಕಾಂಗ್ರೆಸ್ ಒಂದಾಗಿ, ಸರಕಾರ ರಚಿಸಲು ಮುಂದಾಗಿದೆ. ರಾಜ್ಯಪಾಲರ ಬಳಿ ಸರಕಾರ ರಚಿಸಲು ಹಕ್ಕು ಮಂಡನೆಗೆ ಮುಂದಾಗಿದೆ. ಇತ್ತ ಬಿಜೆಪಿಯೂ ತನ್ನದೇ ರೀತಿಯಲ್ಲಿ ಸರಕಾರ ರಚಿಸಲು ಅಗತ್ಯ ಅಡಿಪಾಯ ಹಾಕಿಕೊಳ್ಳುತ್ತಿದೆ.

ಸರಕಾರ ರಚನೆ: ಜೆಡಿಎಸ್‌‌ಗೆ ಕಾಂಗ್ರೆಸ್ ವಿಧಿಸಿದ ಶರತ್ತುಗಳೇನು?

222 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ 104, ಕಾಂಗ್ರೆಸ್‌ಗೆ 78 ಹಾಗೂ ಜೆಡಿಎಸ್ 38 ಸ್ಥಾನಗಳನ್ನು ಗೆದ್ದಿದೆ. ಇತರೆ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಪಡೆದಿದ್ದಾರೆ. ಸರಕಾರ ರಚಿಸಲು 112 ಮ್ಯಾಜಿಕ್ ನಂಬರ್ ಆಗಿದೆ.